Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಗೆ 12,722.46 ಹೆಕ್ಟರ್‌ ಬೆಳೆ ಹಾನಿ: ಸಚಿವ ಶಿವರಾಜ ತಂಗಡಗಿ

ಕನಕಗಿರಿ, ಕಾರಟಗಿ ತಾಲೂಕಿನ ಪ್ರದೇಶಗಳಿಗೆ ಭೇಟಿ, ಪರಿಶೀಲನೆ –ಸಚಿವರಿಂದ ಪರಿಹಾರದ ಭರವಸೆ

Hosashake News by Hosashake News
April 13, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ, ಸುದ್ದಿ
0
ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಗೆ 12,722.46 ಹೆಕ್ಟರ್‌ ಬೆಳೆ ಹಾನಿ: ಸಚಿವ ಶಿವರಾಜ ತಂಗಡಗಿ
Share on FacebookShare on Twitter

*ಮಾಜಿ ಶಾಸಕ ದಡೇಸ್ಗೂರು ಕೇಂದ್ರದ ಬಳಿ ಹೋಗಲಿ ಎಂದ ಸಚಿವ ತಂಗಡಗಿ

ಹೊಸಶಕೆ ನ್ಯೂಸ್-ಕೊಪ್ಪಳ : ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಕೊಪ್ಪಳ ಜಿಲ್ಲೆಯಲ್ಲಿ 12,722.46 ಹೆಕ್ಟರ್‌ ಭತ್ತದ ಬೆಳೆ ಹಾನಿಯಾಗಿದೆ. ಈ ಪೈಕಿ ಕಾರಟಗಿ ತಾಲೂಕಿನಲ್ಲಿ 4.895.33 ಹೆಕ್ಟರ್‌ ಬೆಳೆ ಹಾನಿಯಾಗಿದೆ ಎಂದು ಕನ್ನಡ  ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್‌. ತಂಗಡಗಿ ಅವರು ಹೇಳಿದರು.

ಆಲಿಕಲ್ಲು ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ಕನಕಗಿರಿ ಹಾಗೂ ಕಾರಟಗಿ ತಾಲೂಕಿನ ಪ್ರದೇಶಗಳಿಗೆ ಸಚಿವರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ,  ಬಳಿಕ ಮಾತನಾಡಿದ ಅವರು. ಆಲಿಕಲ್ಲು ಮಳೆಯಿಂದ ನಮ್ಮ ಕಾರಟಗಿ ತಾಲೂಕಿನಲ್ಲಿ ಹೆಚ್ಚು ಭತ್ತದ ಬೆಳೆ ನಾಶವಾಗಿದೆ. ಪ್ರಮುಖವಾಗಿ 12 ಗ್ರಾಮಗಳಲ್ಲಿ ಹೆಚ್ಚಿನ ಹಾನಿಯಾಗಿದೆ. ಉಳಿದಂತೆ ಮಳೆ, ಗಾಳಿಯಿಂದ ದೊಡ್ಡ ಪ್ರಮಾಣದ ಬೆಳೆ ನಷ್ಟವಾಗಿದೆ. ಕಾರಟಗಿ, ಕೂಕನೂರು, ಕನಕಗಿರಿ ಗಂಗಾವತಿ ಸೇರಿ ಕೊಪ್ಪಳ ಜಿಲ್ಲೆಯಲ್ಲಿ 12,722.46 ಹೆಕ್ಟರ್‌ ಭತ್ತದ ಬೆಳೆ ಹಾನಿಯಾಗಿದೆ. ಈ ಪೈಕಿ ಕಾರಟಗಿ ತಾಲೂಕಿನಲ್ಲಿ 4.895.33 ಹೆಕ್ಟರ್‌ ಬೆಳೆ ಹಾನಿಯಾಗಿದೆ ಎಂದರು.

ಕೇಂದ್ರ ಸರ್ಕಾರದ ನಿಯಮದ ಪ್ರಕಾರ ಪ್ರತಿ ಎಕರೆಗೆ 17 ಸಾವಿರ ರು. ಪರಿಹಾರ ಬರಲಿದೆ. ಆಲಿಕಲ್ಲು ಮಳೆಯಿಂದ ಆಗಿರುವ ಬೆಳೆ ಹಾನಿ ಸಂಬಂಧ ನಾನು ಸಚಿವರಾದ ಬೋಸರಾಜು, ಡಾ.ಶರಣಪ್ರಕಾಶ್‌ ಪಾಟೀಲ ಸೇರಿ ಮೂವರು ಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಅಂತೆಯೇ ಕಂದಾಯ ಸಚಿವ ಕೃಷ್ಣ ಬೈರೇಗೌಡರ ಗಮನಕ್ಕೂ ತಂದಿದ್ದೇವೆ. ಅಂದೇ ರಾಯಚೂರು ಮತ್ತು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಕೆಲವು ಸೂಚನೆಗಳನ್ನು ನೀಡಿದ್ದೇವೆ ಎಂದು ತಿಳಿಸಿದರು.

ಖದ್ದು ನಾನೇ ತಹಶಿಲ್ದಾರ್‌ಗಳ ಜತೆ ಮಾತನಾಡಿದ್ದೇನೆ. ಮಾರನೇ ದಿನವೇ ತಹಶೀಲ್ದಾರ್‌ಗಳು, ಗ್ರಾಮಲೆಕ್ಕಿಗರು, ಕೃಷಿ ಇಲಾಖೆ ಅಧಿಕಾರಿಗಳು ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಹಾರದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ಬೆಳೆಹಾನಿ ಸಮೀಕ್ಷೆ ವರದಿ ಬರಲಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಏ.17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಅಂದು ಸಭೆ ಮುಗಿದ ಬಳಿಕ ನಾವು ಮೂವರು ಮಂತ್ರಿಗಳು ಹಾಗೂ ಈ ಭಾಗದ ಶಾಸಕರು ಬೆಳೆ ಹಾನಿ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತನಾಡುತ್ತೇವೆ. ಅವಕಾಶ ಸಿಕ್ಕರೆ ಸಚಿವ ಸಂಪುಟ ಸಭೆಗೂ ಮುನ್ನ ದಿನ ಮುಖ್ಯಮಂತ್ರಿ ಅವರನ್ನು ಭೇಟಿಯಾಗುತ್ತೇವೆ ಎಂದು ಹೇಳಿದರು.ಸೋಮವಾರ ಅಧಿಕಾರಿಗಳ ಸಭೆ: ಬೆಳೆ ಹಾನಿ ಸಂಬಂಧ ಚರ್ಚಿಸಲು ಸೋಮವಾರ ಮಧ್ಯಾಹ್ನ 12.30ಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ. ಮಳೆ ಅವಾಂತರದಿಂದ ಜಿಲ್ಲೆಯಲ್ಲಿ ಭಯಂಕರ ವಾತಾವರಣ ಸೃಷ್ಟಿಯಾಗಿದೆ. ಕೆಲವು ಭಾಗಗಳಲ್ಲಿ ಶೇ.100ರಷ್ಟು ಬೆಳೆ ಹಾನಿಯಾಗಿದೆ. ಅತಿಹೆಚ್ಚು ಹಾನಿಯಾಗಿರುವ 12 ಗ್ರಾಮಗಳಲ್ಲಿ ಸುಮಾರು 3 ಸಾವಿರ ರೈತರು ಬೆಳೆ ವಿಮೆ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೀಗಾಗಿ ಲೀಡ್‌ ಬ್ಯಾಂಕ್‌ ಅಧಿಕಾರಿಗಳು ಹಾಗೂ ಸಂಬಂಧಿತ ವಿಮಾ ಕಂಪನಿ ಅಧಿಕಾರಿಗಳನ್ನು ಸಭೆಗೆ ಕರೆಯಲಾಗಿದೆ. ನಾನೂ ಈ ಭಾಗದಲ್ಲಿ ಮೂರು ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ವಾಸ್ತವ ಸತ್ಯದ ಅರಿವು ಇದೆ. ಹೀಗಾಗಿ ಬೆಳೆ ಹಾನಿ ಬಗ್ಗೆ ಚರ್ಚಿಸಿ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರೈತರಿಗೆ ಪೂರ್ಣ ಪ್ರಮಾಣದ ನಷ್ಟ ಕಟ್ಟಿಕೊಡಲು ಯಾರಿಂದಲೂ ಸಾಧ್ಯವಿಲ್ಲ. ರೈತರು ಕಷ್ಟದಲ್ಲಿರುವುದರಿಂದ ಗರಿಷ್ಠ ಮಟ್ಟದ ಪರಿಹಾರ ಕೊಡಿಸಲು ಸರ್ವ ಪ್ರಯತ್ನ ಮಾಡುವೆ ಎಂದು ಸಚಿವ ತಂಗಡಗಿ ತಿಳಿಸಿದರು.

ಮಾಜಿ ಶಾಸಕ ದಡೇಸ್ಗೂರು ಕೇಂದ್ರದ ಬಳಿ ಹೋಗಲಿ: ಈಗಾಗಲೇ ಅತಿಹೆಚ್ಚು ಬೆಳೆ ಹಾನಿಯಾಗಿರುವ ಜಾಗ ಗುರುತಿಸಲು ಸೂಚಿಸಿದ್ದೇನೆ. ಇನ್ನು ಮಾಜಿ ಶಾಸಕರು ಅವರ ಅವಧಿಯಲ್ಲಿ ಎಷ್ಟು ಸಮಯದಲ್ಲಿ ಪರಿಹಾರ ಕೊಡಿಸಿದ್ದಾರೆ ಎಂದು ತೆಗೆದು ನೋಡಲಿ. ಈ ಜಿಲ್ಲೆಯಲ್ಲಿ ನಾನು ಯಾರೂ ಮಾಡದ ಕೆಲಸಗಳನ್ನು ಮಾಡಿದ್ದೇನೆ. ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಬೆಳೆಹಾನಿ ಪರಿಹಾರ ನಿಯಮ ಮಾಡಿರುವುದು ಕೇಂದ್ರ ಸರ್ಕಾರ. ಮಾಜಿ ಶಾಸಕರು ಬುಕ್‌ ತೆಗೆದುಕೊಂಡು ಕೇಂದ್ರ ಸರ್ಕಾರದ ಬಳಿ ಹೋಗಲಿ ಮಾಜಿ ಶಾಸಕ ಬಸವರಾಜ್ ದಡೇಸಗೂರು ಅವರ ಹೆಸರು ಹೇಳದೆ ಛೇಡಿಕೆಸಿದರು.

ತುಂಗಾ ಭದ್ರ ಡ್ಯಾಂ ಗೇಟ್‌ ಬಗ್ಗೆ ಹಿಂದೆಯೇ ಹೇಳಿದ್ದೇನೆ. ಡ್ಯಾಂನ ನಿಯಂತ್ರಣ ನಮ್ಮ ಬಳಿ ಇಲ್ಲ. ಅದಕ್ಕೆ ಬೋರ್ಡ್‌ ಇದೆ. ಕರ್ನಾಟಕದ ಪಾಲಿನ ಹಣ ಕೊಡಲು ನಾವು ಈಗಲೂ ಸಿದ್ಧರಿದ್ದೇವೆ ಎಂದು ಸಚಿವ ಶಿವರಾಜ ಎಸ್‌.ತಂಗಡಗಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಕೊಪ್ಪಳದ ಕೆಆರ್‌ಡಿಎಲ್‌ ಅವ್ಯವಹಾರ ಸಂಬಂಧ ತನಿಖೆ ಆದೇಶಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರ ಜತೆಗೂ ಮಾತನಾಡಿದ್ದೇನೆ. ಈಗಾಗಲೇ ಪ್ರಕರಣ ದಾಖಲಾಗಿದೆ. ಇದರಲ್ಲಿ ಯಾರೇ ಇದ್ದರೂ ಕ್ರಮ ಆಗಲಿದೆ. 17 ಕೋಟಿ ರು. ಮತ್ತು 25 ಕೋಟಿ ರು ಮೊತ್ತದ ಜಿಎಸ್‌ಟಿ ಸಂಬಂಧ ಮಾಹಿತಿ ಪಡೆದಿದ್ದೇನೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

== ಕಂದಾಯ ಕಾಯ್ದೆಯ ಅನ್ವಯ ಭೂ ಮಾಲೀಕರ ಖಾತೆಗೆ ಬೆಳೆ ಪರಿಹಾರ ಜಮೆಯಾಗಲಿದೆ. ಭೂಮಿ ಗುತ್ತಿಗೆದಾರರ ಖಾತೆಗೆ ಪರಿಹಾರದ ಹಣ ಹಾಕಲು ಕಾನೂನಿನಲ್ಲಿ ಅವಕಾಶವಿಲ್ಲ. ಗುತ್ತಿಗೆದಾರರು ಬೆಳೆ ಬೆಳೆಯಲು ಕಷ್ಟಪಟ್ಟು ಸಾಕಷ್ಟು ಖರ್ಚು ಮಾಡಿರುತ್ತಾರೆ. ಹೀಗಾಗಿ ಭೂ ಮಾಲೀಕರು ಗುತ್ತಿಗೆದಾರರಿಗೆ ಸಹಕರಿಸಬೇಕು: ಶಿವರಾಜ ತಂಗಡಗಿ, ,ಜಿಲ್ಲಾ ಉಸ್ತುವಾರಿ ಸಚಿವರು==

Tags: 12722.46 hectares of crops in Koppal district: Minister Shivaraj Thangadgi722.46 ಹೆಕ್ಟರ್‌ ಬೆಳೆ ಹಾನಿ: ಸಚಿವ ಶಿವರಾಜ ತಂಗಡಗಿHailstorm damages 12Koppal ಕನಕಗಿರಿMinister Thangadgi says former MLA Dadesguru should go to the centerVisit and inspection of areas in Kanakagiri and Karatagi taluks – Minister Shivaraj Thangadgiಕಾರಟಗಿ ತಾಲೂಕಿನ ಪ್ರದೇಶಗಳಿಗೆ ಭೇಟಿಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಗೆ 12ಪರಿಶೀಲನೆ – ಸಚಿವ ಶಿವರಾಜ ತಂಗಡಗಿ ಪರಿಹಾರದ ಭರವಸೆಮಾಜಿ ಶಾಸಕ ದಡೇಸ್ಗೂರು ಕೇಂದ್ರದ ಬಳಿ ಹೋಗಲಿ ಎಂದ ಸಚಿವ ತಂಗಡಗಿ
Previous Post

ಏ.17 ರ ವಿಶೇಷ ಸಚಿವ ಸಂಪುಟ ಸಭೆಯ ಮುನ್ನ ಜಾತಿ ಗಣತಿ ವರದಿ ‘ಸೋರಿಕೆ’?:

Next Post

ಅಂಬೇಡ್ಕರ್ ಎಂಬುವುದೇ ಸ್ಪೂರ್ತಿ…

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!