ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು:ದಲಿತ ನಾಯಕ ಪೂಜಾರ ಒತ್ತಾಯ
ಹೊಸಶಕೆ ನ್ಯೂಸ್-ಗಜೇಂದ್ರಗಡ: ಒಳಮೀಸಲಾತಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಕಾಲಾವಕಾಶ ವಿಸ್ತರಣೆ ಮಾಡದೇ, ಕೂಡಲೇ ಈಗಾಗಲೇ ಸಂಗ್ರಹಿಸಿರುವ ಮಧ್ಯಂತರ ವರದಿ ದತ್ತಾಂಶವನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿ ಮಾಡುವಂತೆ ಬೆಂಗಳೂರಿನಲ್ಲಿ ಮಾ.21 ರಂದು ನಡೆಯುವ ಬೃಹತ್ ಹೋರಾಟ ನಡೆಯಲಿದೆ ಎಂದು ದಲಿತ ಯುವ ಮುಖಂಡ ದುರಗೇಶ ಪೂಜಾರ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮೀಸಲಾತಿ ಜಾರಿ ವಿಷಯದಲ್ಲಿ ಆಯಾ ರಾಜ್ಯಗಳಿಗೆ ಅಧಿಕಾರ ಕೊಟ್ಟಿದೆ. ಆದರೂ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸಿದೆ ಎಂದು ದೂರಿದರು.
ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು, ನಮ್ಮ ಹಕ್ಕು ನಾವುಗಳು ಪಡೆದುಕೊಳ್ಳಲು ಸಂಘಟಿತ ಹೋರಾಟ ಬಹು ಮುಖ್ಯ, ಬೆಂಗಳೂರಿನಲ್ಲಿ ನಡೆಯುವ ಮೀಸಲಾತಿ ಹೋರಾಟದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಯಶಸ್ವಿಗೊಳಿಸಲು ಮನವಿ ಮಾಡಿದರು..ಹೊಸ ಆಯೋಗ ರಚಿಸಬೇಕು ಎನ್ನುವುದು ಮಾದಿಗ ಸಂಘಟನೆಗಳ ಒಳಮೀಸಲಾತಿ ಹೋರಾಟಗಾರರ ಬೇಡಿಕೆಯಾಗಿರಲಿಲ್ಲ. ಈಗಾಗಲೇ ಸರ್ಕಾರದ ಮುಂದೆ ನ್ಯಾ. ಸದಾಶಿವ ಆಯೋಗ, ಮಾಧುಸ್ವಾಮಿ ಸಮಿತಿ, 2011ರ ಜನಗಣತಿಯ ದತ್ತಾಂಶಗಳಿವೆ ಎಂದು ವಿವರಿಸಿದರುಈ ನಡುವೆ ನ್ಯಾ.ನಾಗಮೋಹನ್ ದಾಸ್ ಸಮಿತಿಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸುವ ಹುನ್ನಾರವನ್ನು ಸರ್ಕಾರ ಮಾಡುತ್ತಿದೆ. ಇದನ್ನು ಕೈಬಿಟ್ಟು ಕೂಡಲೇ ಮಧ್ಯಂತರ ವರದಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.