Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಬೇಸಿಗೆಯಲ್ಲಿ ಕುಡಿಯುವ ನೀರು, ನಿಂತ ಬೆಳೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನೀರು ಹರಿಸಲು ತೀರ್ಮಾನ

Hosashake News by Hosashake News
March 21, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜಕೀಯ, ರಾಜ್ಯ, ಶಿಕ್ಣಣ-ಆರೋಗ್ಯ, ಸುದ್ದಿ
0
ಬೇಸಿಗೆಯಲ್ಲಿ ಕುಡಿಯುವ ನೀರು, ನಿಂತ ಬೆಳೆಗೆ ನೀರು: ಸಚಿವ ಶಿವರಾಜ್ ತಂಗಡಗಿ
Share on FacebookShare on Twitter

* ಬೇಸಿಗೆಯಲ್ಲಿ ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಿಗೆ ನೀರು ಹರಿಸಲು ತೀರ್ಮಾನ

ಹೊಸಶಕೆ ನ್ಯೂಸ್–ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರಿಸಿ ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಿಗೆ ಕುಡಿಯುವ ನೀರು ಒಳಗೊಂಡಂತೆ ನೀರಾವರಿಗೆ ನೀರು ಹರಿಸಲು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಹಂಚಿಕೆ ಮಾಡಿ ತೀರ್ಮಾನ ಕೈಗೊಳ್ಳಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯು ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ  ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳಿಗೆ ಆದ್ಯತೆ ಕೊಟ್ಟು ನೀರು ಒದಗಿಸಲು ತೀರ್ಮಾನ ಮಾಡಲಾಗಿದೆ.

 ಪ್ರಸ್ತುತ ಜಲಾಶಯದಲ್ಲಿ ನೀರಿನ ಸಾಮರ್ಥ್ಯ 18 ಟಿಎಂಸಿ, ಇದರಲ್ಲಿ ಡೆಟ್ ಸ್ಟೋರೆಜ್ 2 ಟಿಎಂಸಿ, ಅವಿಯಾಗುವಿಕೆ 1.2 ಟಿಎಂಸಿ, ಈ ಪೈಕಿ ರಾಜ್ಯದ ಪಾಲು 11 ಟಿಎಂಸಿ, ಆಂಧ್ರಪ್ರದೇಶದ ಪಾಲು 4 ಟಿಎಂಸಿ ಇದೆ. ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ಏ.1ರಿಂದ ಏ.10ರವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 3000 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು. ಎಡದಂಡೆ ವಿಜಯನಗರ ಕಾಲುವೆಗೆ ಏ.11ರಿಂದ ಮೇ 10ರವರೆಗೆ 150 ಕ್ಯೂಸೆಕ್ಸ್ ನಂತೆ ವಿತರಣಾ‌ ಕಾಲುವೆ 1 ರಿಂದ 11ಎ ವರೆಗೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದ್ದಲ್ಲಿ ಯಾವುದೇ ಮೊದಲು ಅದು ಅನ್ವಯಿಸುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಅದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಶಿವರಾಜ್. ಎಸ್. ತಂಗಡಗಿ ಅವರು ಹೇಳಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ನಿಷೇಧಾಜ್ಞೆ ಮೂಲಕ ನೀರು ಹರಿಸುವುದು, ಹಾಗೂ ಜಿಲ್ಲಾಧಿಕಾರಿಗಳು ಕಲಂ 144ನ್ನು ಅಳವಡಿಸಿ ಸೂಕ್ತ ಪೊಲೀಸ್ ಬಂದೋಬಸ್ತನ್ನು ಪಡೆದು ಕುಡಿಯುವ ನೀರಿನ ಕೆರೆ ಕಟ್ಟೆಗಳನ್ನು ತುಂಬಿಸಿಕೊಳ್ಳಲು ಸಚಿವರು ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಶರಣ್ ಪ್ರಕಾಶ್ ಪಾಟೀಲ್, ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕರಾದ ನಾಗರಾಜ್,  ಎಚ್.ಆರ್.ಗವಿಯಪ್ಪ,  ಹಂಪನಗೌಡ ಬಾದರ್ಲಿ, ರಾಘವೇಂದ್ರ ಹಿಟ್ನಾಳ, ಗಣೇಶ್, ಸೇರಿದಂತೆ ನಾಲ್ಕು ಜಿಲ್ಲೆಗಳ ಜನಪ್ರತಿನಿಧಿಗಳು, ರೈತ ಮುಖಂಡರು, ಜಿಲ್ಲಾಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

==ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಲಭ್ಯ ವಾಗುವ ನೀರಿನಲ್ಲಿ ಏ.1ರಿಂದ ಏ.10ರವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 450 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು. ಇನ್ನು ರಾಯ ಬಸವಣ್ಣ ಕಾಲುವೆಗೆ ಏ.1ರಿಂದ ಮೇ 31ರವರೆಗೆ ಲಭ್ಯವಾಗುವ ನೀರಿನಲ್ಲಿ 200 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು:  ಶಿವರಾಜ್ ಎಸ್.ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವರು ==

Tags: * Decision to release water to Raichur* ಬೇಸಿಗೆಯಲ್ಲಿ ರಾಯಚೂರುBellary and Vijayanagar districts during summerDrinki Minister Shivraj ThangadgiDrinking water in summerKarnataka Koppal Hosashake NewsKoppalKoppal Hosashake DailyTungabhadra Irrigation Advisory Committee meetingwater for standing crops: Minister Shivraj Thangadgiಕೊಪ್ಪಳತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನೀರು ಹರಿಸಲು ತೀರ್ಮಾನನಿಂತ ಬೆಳೆಗೆ ನೀರು: ಸಚಿವ ಶಿವರಾಜ್ ತಂಗಡಗಿಬಳ್ಳಾರಿಬೇಸಿಗೆಯಲ್ಲಿ ಕುಡಿಯುವ ನೀರುವಿಜಯನಗರ ಜಿಲ್ಲೆಗಳಿಗೆ ನೀರು ಹರಿಸಲು ತೀರ್ಮಾನ
Previous Post

ಹೊಸಶಕೆ ದಿನಪತ್ರಿಕೆ

Next Post

ಎಲ್ಲರ ಜೀವನ ಬೆಳಕಿನಂತೆ ಪ್ರಜ್ವಲಿಸಲಿ ಶ್ರೀ ಬಸವಲಿಂಗೇಶ್ವರ ಸ್ವಾಮೀಜಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!