Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕುಷ್ಟಗಿವರೆಗೆ ಪ್ರಯೋಗಾರ್ಥ ರೈಲು ಸಂಚಾರ :ರೈಲ್ವೆ ಸಚಿವರನ್ನು ಭೇಟಿಯಾಗಿ ಅಭಿನಂದನೆ

ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ

Hosashake News by Hosashake News
March 29, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜಕೀಯ, ರಾಜ್ಯ, ಸಾಮಾಜಿಕ, ಸುದ್ದಿ
0
ಕುಷ್ಟಗಿವರೆಗೆ ಪ್ರಯೋಗಾರ್ಥ ರೈಲು ಸಂಚಾರ :ರೈಲ್ವೆ ಸಚಿವರನ್ನು ಭೇಟಿಯಾಗಿ ಅಭಿನಂದನೆ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ: ಬಹು ನಿರೀಕ್ಷಿತ‌ ಗದಗ- ವಾಡಿ ರೈಲ್ವೆ ಯೋಜನೆಯ ಕಾಮಗಾರಿ ಕುಷ್ಟಗಿ ಭಾಗದವರೆಗೆ ಪೂರ್ಣಗೊಂಡಿದ್ದು, ಪ್ರಯೋಗಾರ್ಥ ರೈಲು ಸಂಚಾರ ಯಶಸ್ವಿಯಾಗಿರುವುದು ಸಂತಸ ತಂದಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿರುವ ವೈದ್ಯ ಬಸವರಾಜ ಕ್ಯಾವಟರ್ ಸಂತಸ ವ್ಯಕ್ತಪಡಿಸಿದರು.

ಬೆಂಗಳೂರಿನ ಸಚಿವರ ನಿವಾಸದಲ್ಲಿ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರನ್ನು ಶನಿವಾರ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಕ್ಯಾವಟರ್ ಅವರು, ಕೇಂದ್ರ ಸರಕಾರದ ಕ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಾರ್ಚ 28ರಂದು ಗದಗ-ವಾಡಿ ಹೊಸ ರೈಲ್ವೆ ಮಾರ್ಗ ವ್ಯಾಪ್ತಿಯಲ್ಲಿ ನಿಂಗಲಬಂಡಿ- ಕುಷ್ಟಗಿವರೆಗೆ ಸಿಆರ್ ಎಸ್ ತಂಡದಿಂದ ರೈಲ್ವೆ ಮಾರ್ಗದ ತಾಂತ್ರಿಕ ತಪಾಸಣೆ, ಪ್ರಯೋಗಾರ್ಥ ರೈಲು ಸಂಚಾರ ಅತ್ಯಂತ ಯಶಸ್ವಿಯಾಗಿ ನಡೆದಿದೆ.

ಇದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಹಾಗೂ ತಮ್ಮ ಸಹಕಾರದ ಪ್ರತಿಫಲವಾಗಿದೆ.
ಹೀಗಾಗಿ ಕೇಂದ್ರ ಸರಕಾರ ಹಾಗೂ ರೈಲ್ವೆ ಇಲಾಖೆಯ ಬದ್ದತೆಗೆ ಅಭಿನಂದಿಸುತ್ತೇನೆ ಎಂದು ಸಚಿವ ಸೋಮಣ್ಣನವರ ಎದುರು ಬಸವರಾಜ ಕ್ಯಾವಟರ್ ಅವರು ಪ್ರಸ್ಥಾಪಿಸಿದ್ದಾರೆ. ಸ್ವಾತಂತ್ರ್ಯ ನಂತರ ಕುಷ್ಟಗಿಗೆ ಬಂದ ಮೊದಲ ರೈಲು ಇದಾಗಿದ್ದು, ಈ ಭಾಗದ ಜನತೆಯ ಹಲವು ದಶಕಗಳ ಕನಸು ಕೊನೆಗೂ ಸಾಕಾರಗೊಂಡಿದೆ.

ಆರಂಭಿಕವಾಗಿ ಕುಷ್ಟಗಿ- ಹುಬ್ಬಳ್ಳಿ, ಕುಷ್ಟಗಿ-ಯಶವಂತಪುರ ಮಾರ್ಗವಾಗಿ ರೈಲು ಸಂಚಾರ ಕಲ್ಪಿಸಬೇಕೆನ್ನುವುದು ಜನತೆ ಪ್ರಮುಖ ಬೇಡಿಕೆಯಾಗಿದೆ. ಈ ರೈಲು ಸಂಚಾರದಿಂದ ಸಾರ್ವಜನಿಕರಿಗೆ ಹಾಗೂ ಸರಕು ಸಾಗಾಣಿಕೆಗೆ ಅನಕೂಲವಾಗುವ ಜತೆಗೆ ಭವಿಷ್ಯದಲ್ಲಿ ಆದಾಯ ದ್ವಿಗುಣವಾಗುವ ಭರವಸೆ ಮೂಡಿಸಿದೆ.

ಈ ಭಾಗದ ಬಹುದಿನಗಳ ಕನಸು ಗದಗ-ವಾಡಿ ರೈಲ್ವೆ ಯೋಜನೆಯ ತಳಕಲ್ ನಿಂದ ಕುಷ್ಟಗಿವರೆಗೆ ಈ ರೈಲು ಮಾರ್ಗ ವಾಡಿವರೆಗೂ ಪೂರ್ಣಗೊಂಡರೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಸಂಪರ್ಕ ಸಾಧ್ಯವಾಗಲಿದೆ. ಜನರ ಆಶೋತ್ತರಗಳಿಗೆ ಸ್ಪಂಧಿಸಿದ ನಮ್ಮ ಕೇಂದ್ರ ಸರಕಾರ ಹಾಗೂ ನೈಋತ್ಯ ರೈಲ್ವೆ ಇಲಾಖೆಗೆ ಮತ್ತೊಮ್ಮೆ ಅಭಿನಂದಿಸಿ, ಧನ್ಯವಾದ ಹೇಳುವೆ ಎಂದು ಸಚಿವರಿಗೆ ತಿಳಿಸಿದ್ದಾರೆ.
ಈ ವೇಳೆ ಮುಖಂಡ ನೀಲಕಂಠಯ್ಯ ಹಿರೇಮಠ ಇದ್ದರು.

Tags: BJP State Executive Member BasavarajBJP State Executive Member Basavaraj met State Railway Minister V. Somanna.Meet and congratulate Railway MinisterTrial train service to KushtagiriTrial train service to Kushtagiri: Meet and congratulate Railway Minister
Previous Post

13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಕೃಷಿ, ಶಿಕ್ಷಣ ಕ್ಷೇತ್ರದಲ್ಲಿ ಹೇರಳ ಅವಕಾಶ : ಎನ್.ಸೂರಿಬಾಬು

Next Post

ಕಿಷ್ಕಿಂಧಾ ಅಂಜನಾದ್ರಿ ಭಾಗವನ್ನು ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಬೇರ್ಪಸಬೇಕು:ಪತ್ರಕರ್ತ ಕೆ.ನಿಂಗಜ್ಜ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!