Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕೊಪ್ಪಳ ನಗರಸಭೆಯಲ್ಲಿ ಇ-ಖಾತಾ ಅಭಿಯಾನಕ್ಕೆ ಚಾಲನೆ

ಆಸ್ತಿಯ ಎ ಖಾತ, ಬಿ ಖಾತ ಸುಲಭವಾಗಿ ಪಡೆದುಕೊಳ್ಳಿ -  ಅಧ್ಯಕ್ಷ ಅಮ್ಜದ್ ಪಟೇಲ್

Hosashake News by Hosashake News
April 4, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ, ಸುದ್ದಿ
0
ಕೊಪ್ಪಳ ನಗರಸಭೆಯಲ್ಲಿ ಇ-ಖಾತಾ ಅಭಿಯಾನಕ್ಕೆ ಚಾಲನೆ
Share on FacebookShare on Twitter

ಹೊಸಶಕೆ ನ್ಯೂಸ್ -ಕೊಪ್ಪಳ : ಸಾರ್ವಜನಿಕರು ತಮ್ಮ ಆಸ್ತಿಯ ಎ ಖಾತ ಮತ್ತು ಬಿ ಖಾತವನ್ನು ಸುಲಭವಾಗಿ ಪಡೆದುಕೊಳ್ಳುವಂತೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಹೇಳಿದರು.

ಅವರು ಗುರುವಾರ ನಗರದ ಮೂರನೇ ವಾರ್ಡಿನಲ್ಲಿ ಕೊಪ್ಪಳ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕೊಪ್ಪಳ ನಗರಸಭೆ ಕಾರ್ಯಲಯದ ವತಿಯಿಂದ ಇ-ಖಾತಾ ಅಭಿಯಾನ ಮತ್ತು ಎ ಖಾತ ಮತ್ತು ಬಿ ಖಾತ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.  ಸುಮಾರು ವರ್ಷಗಳಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ ಖಾತಾ ಮತ್ತು ಬಿ ಖಾತ, ಎಂಬಿ ನಂಬರ್ ನಮೂನೆ 3 ನ್ನು ಪಡೆಯಲು ಸಾರ್ವಜನಿಕರು ಪರದಾಡುವಂತ ಸ್ಥಿತಿ ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು ಸಾರ್ವಜನಿಕರ ಅನುಕೂಲಕ್ಕಾಗಿ ಮನೆಬಾಗಿಲಿಗೆ ಎ ಖಾತ ಮತ್ತು ಬಿ ಖಾತ ಫಾರಂ ನಂಬರ್ 3ರ ವಿತರಣೆ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದರಿಂದಾಗಿ ತುಂಬಾ ಅನುಕೂಲವಾಗಿದೆ. ನಮ್ಮ ಸರ್ಕಾರವು ಹಮ್ಮಿಕೊಂಡಿರುವ ಈ ಅಭಿಯಾನದಡಿ ಮೂರು ತಿಂಗಳ ಒಳಗಾಗಿ ಕೊಪ್ಪಳ ನಗರದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಎ ಖಾತ ಬಿ ಖಾತದಿಂದ ಜನರಿಗೆ ಸರ್ಕಾರದಿಂದ ವಿವಿಧ ಗೃಹ ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯಗಳು ಅತ್ಯಂತ ಸುಲಭವಾಗಿ ಸಿಗಲಿವೆ. ಇಂತಹ ನೂತನ ಯೋಜನೆಯನ್ನು ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದು, ಇದರಿಂದ ಕೊಪ್ಪಳ ನಗರಸಭೆ ವ್ಯಾಪ್ತಿಯ ಸುಮಾರು 8 ಸಾವಿರಕ್ಕೂ ಅಧಿಕ ನಿವೇಶನಗಳು, ಆಶ್ರಯ ಮನೆಗಳಿಗೆ ಅನುಕೂಲವಾಗಲಿದೆ. ಕೊಪ್ಪಳ ನಗರದ ಪ್ರತಿಯೊಬ್ಬರು ತಮ್ಮ ಮನೆಯ ಆಸ್ತಿ ದಾಖಲೆಯ ಪತ್ರಗಳನ್ನು ನೀಡಿ, ಎ ಖಾತ ಮತ್ತು ಬಿ ಖಾತ ಪಡೆದುಕೊಂಡು ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಸಾರ್ವಜನಿಕರಿಗೆ ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೊಪ್ಪಳ ನಗರಸಭೆಯ ಉಪಾಧ್ಯಕ್ಷರಾದ ಅಶ್ವಿನಿ ಗದುಗಿನಮಠ್, ಪೌರಾಯುಕ್ತರಾದ ಗಣಪತಿ ಪಾಟೀಲ್, ಓಣಿಯ ಹಿರಿಯರಾದ ಖಾಜಾ ಹುಸೇನ್ ರೆವಡಿ, ಸಲೀಂ ಅಳವಂಡಿ, ಹಜರತ್ ಮುಜಾವರ್ ಸೇರಿದಂತೆ ನಗರಸಭೆಯ ಕಂದಾಯ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮತ್ತಿತರರು ಉಪಸ್ಥಿತರಿದ್ದರು.

Tags: CMC Koppal Karnataka NewsE-Khata campaign launched in Koppal Municipal CouncilKoppal Get A and B accounts of assets easily - President Amjad Patelಆಸ್ತಿಯ ಎ ಖಾತಕೊಪ್ಪಳ ನಗರಸಭೆಯಲ್ಲಿ ಇ-ಖಾತಾ ಅಭಿಯಾನಕ್ಕೆ ಚಾಲನೆಬಿ ಖಾತ ಸುಲಭವಾಗಿ ಪಡೆದುಕೊಳ್ಳಿ - ಅಧ್ಯಕ್ಷ ಅಮ್ಜದ್ ಪಟೇಲ್
Previous Post

 ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ ಎಡಿಸಿ ಸಿದ್ರಾಮೇಶ್ವರ

Next Post

ಕುಡಿಯುವ ನೀರು, ಮೇವಿನ ಕೊರತೆ ಉಂಟಾಗದಂತೆ ಕ್ರಮ: ವಿಠ್ಠಲ್ ಚೌಗಲಾ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!