ಹೊಸಶಕೆ ನ್ಯೂಸ್ -ಕೊಪ್ಪಳ : ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮೇ.2 ರಂದು ಶ್ರೀ ಶಂಕರಾಚಾರ್ಯ ಜಯಂತಿ ಮತ್ತು ಮೇ.4 ರಂದು ಶ್ರೀ ಭಗೀರಥ ಜಯಂತಿ ಹಾಗೂ ಮೇ. 10 ರಂದು ಶ್ರೀ ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಎಲ್ಲಾ ಮಹನಿಯರ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಹಾಯಕ ಆಯುಕ್ತರ ಕಚೇರಿಯ ತಹಶಿಲ್ದಾರ ರಜನಿಕಾಂತ್ ಹೇಳಿದರು.
ಮಂಗಳವಾರ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಹನಿಯರ ಜಯಂತಿ ಆಚರಣೆ ಕುರಿತಂತೆ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ತಾಲ್ಲೂಕು ಕೇಂದ್ರಗಳಲ್ಲಿ ಮತ್ತು ಗ್ರಾಮ ಪಂಚಾಯತಗಳಲ್ಲಿ, ಶಾಲಾ, ಕಾಲೇಜು ವಸತಿ ನಿಲಯಗಳಲ್ಲಿ ಈ ಎಲ್ಲಾ ಮಹನಿಯರ ಜಯಂತಿಗಳನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕಾಗಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಜಿ., ಆರೋಗ್ಯ ಇಲಾಖೆಯ ಶಿವಾನಂದ ವ್ಹಿ.ಪಿ, ಶ್ರೀ ಶಂಕರಾಚಾರ್ಯ ಸಮಾಜದ ಜಿಲ್ಲಾಧ್ಯಕ್ಷರಾದ ಡಿ.ವಿ ಜೋಷಿ, ಸಮಾಜದ ಮುಖಂಡರಾದ ರವಿ ಪುರೋಹಿತ, ರಮೇಶ, ಕೆ., ಅಶೋಕ, ವಿ ಮತ್ತು ರೆಡ್ಡಿ ಸಮಾಜದ ಮುಖಂಡರಾದ ಹನುಮ ರೆಡ್ಡಿ, ಶಂಕರಗೌಡ, ಕಾಶೀನಾಥ್ ರೆಡ್ಡಿ, ವಿರೂಪಾಕ್ಷಪ್ಪ, ನಾಗರಾಜ, ಹಾಗೂ ಭಗೀರಥ ಸಮಾಜದ ಜಿಲ್ಲಾಧ್ಯಕ್ಷರಾದ ಯಲ್ಲಪ್ಪ ಗದ್ದಿ, ಮುಖಂಡರಾದ ವೆಂಕಟೇಶ ಬ್ಯಾಡಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.