Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಪ್ರವಾಹ, ಅತಿವೃಷ್ಟಿಯಿಂದ ಆಗುವ ಹಾನಿ ತಪ್ಪಿಸಲು ಕ್ರಮ ವಹಿಸಬೇಕು:ಸಚಿವ ಸಂತೋಷ ಎಸ್. ಲಾಡ್

ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

Hosashake News by Hosashake News
May 27, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ, ಸಾಮಾಜಿಕ
0
ಪ್ರವಾಹ, ಅತಿವೃಷ್ಟಿಯಿಂದ ಆಗುವ ಹಾನಿ ತಪ್ಪಿಸಲು ಕ್ರಮ ವಹಿಸಬೇಕು:ಸಚಿವ ಸಂತೋಷ ಎಸ್. ಲಾಡ್
Share on FacebookShare on Twitter

ಹೊಸಶಕೆ ನ್ಯೂಸ್-ಧಾರವಾಡ : ಬೆಣ್ಣಿ ಮತ್ತು ತುಪ್ಪರಿ ಹಳ್ಳದ ಅಂಚೆಯಲ್ಲಿರುವ ಗ್ರಾಮಗಳಲ್ಲಿ ರಾತ್ರಿ ವೇಳೆ ಪ್ರವಾಹ, ಅತಿವೃಷ್ಟಿಯಿಂದ ಆಗುವ ಹಾನಿ ತಪ್ಪಿಸಲು ಕ್ರಮ ವಹಿಸಬೇಕು, ಎಲ್ಲ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದು ತಮ್ಮ ತಮ್ಮ ಕರ್ತವ್ಯ ನಿರ್ವಹಿಸಬೇಕು. ಕಾರ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ  ತೋರುವ ಅಧಿಕಾರಿ, ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಸಂತೋಷ ಲಾಡ್ ಅವರು ಎಚ್ಚರಿಸಿದರು.

ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಪಂಚಾಯತ ಸಭಾಂಗಣದಲ್ಲಿ  ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು.ತುಪ್ಪರಿ ಹಳ್ಳ ಮತ್ತು ಬೆಣ್ಣಿ ಹಳ್ಳ ಕೆಲವು ಭಾಗಗಳಲ್ಲಿ ತುಂಬಿ ಹರಿಯುತ್ತಿದ್ದು, ಯಾವ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಬೇಕು. ಅದೇ ರೀತಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಾಗೂ ವಿದ್ಯುತ್ ತಂತಿಗಳು, ಕಂಬಗಳು ಬೀಳದ ಹಾಗೆ ಎಚ್ಚರವಹಿಸಿ ಯಾವುದೇ ಜೀವ ಹಾನಿ ಆಗದಂತೆ ನಿಗಾ ವಹಿಸಬೇಕು. ಹಾಗೂ ಕೋವಿಡ್ ಬಂದಿರುವುದರಿಂದ ಮುನ್ನೆಚ್ಚರಿಕೆ ವಹಿಸಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಅಗತ್ಯವಿರುವ ರಸಗೊಬ್ಬರ ಬೀಜ ಹಾಗೂ ಕಳೆ ನಿಯಂತ್ರಕ ಔಷಧಿಗಳನ್ನು ವಿತರಿಸಬೇಕು. ಪ್ರತಿ ರೈತ ಸಂಪರ್ಕ ಕೇಂದ್ರದಲ್ಲಿ ಮಾಹಿತಿಯನ್ನು ರೈತರಿಗೆ ನೀಡಬೇಕು. ಖಾಸಗಿ ಅಂಗಡಿಗಳು ನಿಯಮಾನುಸಾರ ಬೀಜ, ಗೊಬ್ಬರಗಳನ್ನು ಮಾರಾಟ ಮಾಡಬೇಕೆಂದು ಸಚಿವರು ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಮೇ 22 ರಿಂದ ಸರಿಯುತ್ತಿರುವ ಅಕಾಲಿಕ ಮಳೆಯಿಂದ ಜಿಲ್ಲೆಯ ಕಲಘಟಗಿ ಮತ್ತು ಧಾರವಾಡ ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಪೂರ್ವ ಮುಂಗಾರಿನಿಂದ ಧಾರವಾಡ ತಾಲೂಕು ಮತ್ತು ಕುಂದಗೋಳ ತಾಲೂಕಿನಲ್ಲಿ 2 ಜನ ಸಿಡಿಲು ಬಡಿದು ಸಾವನ್ನಪ್ಪಿದ್ದು, ಪರಿಹಾರ ಕೊಡಲಾಗಿದೆ, ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಉಂಟಾಗುವ ತುರ್ತು ಅವಘಡ ಹಾಗೂ ಪರಿಸ್ಥಿತಿಗಳನ್ನು ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು

ಸಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೋಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಎಸ್ಪಿ ಡಾ.ಗೋಪಾಲ ಎಂ. ಬ್ಯಾಕೋಡ್, ಉಪ ಪೋಲೀಸ್ ಆಯುಕ್ತ ಮಾನಿಂಗ ನಂದಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ ಅವರು ವೇದಿಕೆಯಲ್ಲಿದ್ದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: Dharawad District floods and heavy rains: Minister Santosh S. LadDharwad District Disaster Management Authority MeetingSteps should be taken to avoid damage caused by floods and heavy rains: Minister Santosh S. Ladಅತಿವೃಷ್ಟಿಯಿಂದ ಆಗುವ ಹಾನಿ ತಪ್ಪಿಸಲು ಕ್ರಮ ವಹಿಸಬೇಕು:ಸಚಿವ ಸಂತೋಷ ಎಸ್. ಲಾಡ್ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಪ್ರವಾಹ
Previous Post

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ ಮಕ್ಕಳ ಸಮಗ್ರ ಕಲಿಕೆಗೆ ಸ್ಫೂರ್ತಿ-ಗಂಗಪ್ಪ

Next Post

ಕನ್ನಡ ಭಾಷೆಗೆ ಇರುವ ಶಕ್ತಿ ಅಗಾದವಾದದ್ದು:ನಾಡೋಜ ಕುಂ,ವೀರಭದ್ರಪ್ಪ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!