Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಸುದ್ದಿ

ನೋಂದಣಿ ಇಲಾಖೆಯಲ್ಲಿ ತಾಂತ್ರಿಕ ಸಮಸ್ಯೆ ಆಸ್ತಿ ನೋಂದಣಿಗೆ ಪರದಾಟ

ರಾಜ್ಯದ ಎಲ್ಲ 252 ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲೂ ನೋಂದಣಿ ಪ್ರಕ್ರಿಯೆಗೆ ತೊಡಕು

graochandan1 by graochandan1
February 5, 2025
in ಸುದ್ದಿ
0
ನೋಂದಣಿ ಇಲಾಖೆಯಲ್ಲಿ ತಾಂತ್ರಿಕ ಸಮಸ್ಯೆ ಆಸ್ತಿ ನೋಂದಣಿಗೆ ಪರದಾಟ
Share on FacebookShare on Twitter

ಹೊಸಶಕೆ ನ್ಯೂಸ್-ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕಾವೇರಿ–2 ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ತಿ ನೋಂದಣಿಗೆ ಜನರು ಪರದಾಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ತಾಂತ್ರಿಕ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ. ಸಮಸ್ಯೆ ಶೀಘ್ರ ಬಗೆಹರಿಯಲಿದೆ ಎಂದು ನೋಂದಣಿ ಮಹಾ ಪರಿವೀಕ್ಷಕರಾದ ಕೆ.ಎ.ದಯಾನಂದ ಅವರು ತಿಳಿಸಿದ್ದಾರೆ.
ಬೆಂಗಳೂರು:ಗ್ರಾಮೀಣ ಹಾಗೂ ನಗರ ಪ್ರದೇಶಗಳ ಆಸ್ತಿ ನೋಂದಣಿಗೆ ಸರ್ಕಾರ ಇ–ಸ್ವತ್ತು, ಇ–ಖಾತಾ ಕಡ್ಡಾಯಗೊಳಿಸಿದ ನಂತರ ಹಲವು ಸಮಸ್ಯೆಗಳು ಎದುರಾಗಿದ್ದು, ನೋಂದಣಿ ಪ್ರಕ್ರಿಯೆಗೆ ತೊಡಕಾಗಿತ್ತು. ಈಗ ತಾಂತ್ರಿಕ ಸಮಸ್ಯೆಯಿಂದಾಗಿ ರಾಜ್ಯದ ಎಲ್ಲ 252 ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲೂ ನೋಂದಣಿ ಪ್ರಕ್ರಿಯೆಗೆ ತೊಡಕಾಗಿದೆ. ಪ್ರತಿ ದಿನ ಸರಾಸರಿ ಎಂಟು ಸಾವಿರ ಆಸ್ತಿಗಳ ನೋಂದಣಿ ನಡೆಯುತ್ತಿತ್ತು. ಎರಡು ದಿನಗಳಲ್ಲಿ ಈ ಸಂಖ್ಯೆ ಶೇ 50ರಷ್ಟು ಕುಸಿದಿದೆ ಎನ್ನಲಾಗಿದೆ.


ಜನರು ಸ್ವತ್ತುಗಳ ನೋಂದಣಿಗಾಗಿ ಕಚೇರಿಗಳಿಗೆ ಅಲೆದಾಡುವುದು, ವಿಳಂಬವಾಗುವುದನ್ನು ತಪ್ಪಿಸಲು, ನೋಂದಣಿ ಪ್ರಕ್ರಿಯೆಯನ್ನು ಸುಲಲಿತಗೊಳಿಸಲು ಕಾವೇರಿ ತಂತ್ರಾಂಶದ ಬದಲು ಕಾವೇರಿ–2 ತಂತ್ರಾಂಶ ಅನುಷ್ಠಾನಗೊಳಿಸಲಾಗಿತ್ತು. ಜನರೇ ದಾಖಲೆಗಳನ್ನು ಅಪ್‌ಲೋಡ್ ಮಾಡಿದ ನಂತರ ಉಪ ನೋಂದಣಾಧಿಕಾರಿಗಳು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಸುತ್ತಿದ್ದಾರೆ. ಅನುಮೋದನೆ ದೊರೆತ ನಂತರ ನೋಂದಣಿ ದಿನ, ಸಮಯ ಸಿಗುತ್ತಿದೆ. ಆ ಸಮಯಕ್ಕೆ ಕಚೇರಿಗೆ ತೆರಳಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ.
ಫೆ. 3ರ ಬೆಳಿಗ್ಗೆಯಿಂದಲೇ ತಾಂತ್ರಿಕ ಸಮಸ್ಯೆಯ ಕಾರಣ ದಾಖಲೆಗಳು ಸರಿಯಾಗಿ ಅಪ್‌ಲೋಡ್ ಆಗುತ್ತಿಲ್ಲ. ಕೆಲವರಿಗೆ ಸಾಧ್ಯವಾದರೂ, ಉಪ ನೋಂದಣಾಧಿಕಾರಿಗಳ ಲಾಗಿನ್ ಕಾರ್ಯನಿರ್ವಹಿಸುತ್ತಿಲ್ಲ. ಮುದ್ರಾಂಕ ಶುಲ್ಕ ಪಾವತಿಸಲು ಚಲನ್ ಸಿಗುತ್ತಿಲ್ಲ. ಹಿಂದಿನ ದಿನಗಳಲ್ಲೇ ದಾಖಲೆಗಳನ್ನು ಅಪ್‌ಲೋಡ್ ಮಾಡಿ ದಿನಾಂಕ, ಸಮಯ ಪಡೆದವರು ನೋಂದಣಿಗಾಗಿ ಇಡೀ ದಿನ ಕಾದು ವಾಪಸ್ ಆಗುತ್ತಿದ್ದಾರೆ. ಕಚೇರಿಗಳಲ್ಲಿ ಜನ ಸಂದಣಿ ಹೆಚ್ಚಾಗಿದ್ದು ಕಂಡುಬರುತ್ತಿದೆ.
‘ಎರಡು ದಿನಗಳಿಂದ ಕಾವೇರಿ 2 ತಂತ್ರಾಂಶದ ಲಿಂಕ್ ಸಿಗುತ್ತಿಲ್ಲ. ಮೊದಲೇ ಎಲ್ಲ ಪ್ರಕ್ರಿಯೆ ಮುಗಿಸಿ, ದಿನಾಂಕ ನಿಗದಿ ಮಾಡಿಕೊಂಡವರಿಗೆ ರಜೆ ಹಾಕಿದ್ದು ವ್ಯರ್ಥವಾಗಿದೆ. ಋಣಭಾರ ಪ್ರಮಾಣಪತ್ರ, ದೃಢೀಕರಣ ಪ್ರಮಾಣಪತ್ರ ಸಿಗುತ್ತಿಲ್ಲ. ಬ್ಯಾಂಕ್ ವ್ಯವಾಹರಗಳಿಗೆ ದಾಖಲೆ ಸಲ್ಲಿಸಲು ಪರದಾಡುವಂತಾಗಿದೆ’ ಎಂದು ಸಾರ್ವಜನಿಕರ ಸಾಮಾನ್ಯ ದೂರು ಆಗಿದೆ.

Tags: CleverEducationGradeIdeas
Previous Post

ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ

Next Post

ಕೊಪ್ಪಳದಲ್ಲಿ ಜಿಲ್ಲಾ ಜೆಡಿಎಸ್ ಸದಸ್ಯತ್ವ ನೋಂದಣಿ, ಪಕ್ಷದ ಪ್ರಮುಖರ ಸಭೆ

graochandan1

graochandan1

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!