Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಮಾ.20 ಮತ್ತು 21ಕ್ಕೆ ಐತಿಹಾಸಿಕ ಕನಕಗಿರಿ ಉತ್ಸವ ಆಚರಣೆ 

ಅದ್ದೂರಿ, ವ್ಯವಸ್ಥಿತ ಯಶಸ್ವಿ ಉತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು  ಸಚಿವ ಶಿವರಾಜ ಎಸ್ ತಂಗಡಗಿ ಸೂಚನೆ

Hosashake News by Hosashake News
March 2, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ, ಸುದ್ದಿ
0
ಮಾ.20 ಮತ್ತು 21ಕ್ಕೆ ಐತಿಹಾಸಿಕ ಕನಕಗಿರಿ ಉತ್ಸವ ಆಚರಣೆ 
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ:    ಮಾರ್ಚ್ 20 ಮತ್ತು 21 ರಂದು ಎರಡು ದಿನಗಳ ಕಾಲ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವ ನಡೆಸಲು ನಿರ್ಧರಿಸಲಾಗಿದ್ದು, ಅದ್ದೂರಿ ಹಾಗೂ ವ್ಯವಸ್ಥಿತ ಉತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕನಕಗಿರಿ ಉತ್ಸವ-2025ರ ಸಂಬಂಧ ಶನಿವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಐತಿಹಾಸಿಕ ಪುಣ್ಯ ಕ್ಷೇತ್ರವಾದ ಕನಕಗಿರಿಯ ಜಾತ್ರಾ ಮಹೋತ್ಸವ ಸಂದರ್ಭದಲ್ಲಿಯೇ ಕನಕಗಿರಿ ಉತ್ಸವವನ್ನು ಆಚರಿಸಬೇಕೆಂಬುವುದು ಜನರ ಒತ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಮಾ.20 ಮತ್ತು 21 ರಂದು ಕನಕಗಿರಿ ಉತ್ಸವ ಆಚರಿಸಲಾಗುವುದು ಎಂದರು.

ಉತ್ಸವ ಪ್ರಯುಕ್ತ ಕಳೆದ ಬಾರಿಯಂತೆ ಸ್ವಾಗತ ಸಮಿತಿ, ಶಿಷ್ಠಾಚಾರ, ಮೇರವಣಿಗೆ, ಸಾಂಸ್ಕೃತಿಕ, ವಸತಿ, ಕ್ರೀಡಾ, ಆಹಾರ, ಆರೋಗ್ಯ ಮತ್ತು ನೈರ್ಮಲ್ಯ, ಮೂಲಭೂತ ಸೌಕರ್ಯಗಳ ಸಮಿತಿ, ಸಾರಿಗೆ ಸೇರಿದಂತೆ ಇತರ ಸಮಿತಿಗಳನ್ನು ಕೂಡಲೇ ರಚಿಸಬೇಕು ಮತ್ತು ಎಲ್ಲಾ ಸಮಿತಿಗಳು ತ್ವರಿತವಾಗಿ ಕಾರ್ಯಪ್ರವೃತ್ತರಾಗಬೇಕು. ಸಮಿತಿಗಳು ಕಾರ್ಯಕ್ರಮಗಳ ಯೋಜನೆಗಳನ್ನು ರೂಪಿಸಿ, ತಮ್ಮ ಬೇಡಿಕೆಗಳನ್ನು ಮಾ. 5ರೊಳಗಾಗಿ ಸಲ್ಲಿಸಬೇಕು ಎಂದರು.

ಉತ್ಸವದಲ್ಲಿ ಈ ಬಾರಿ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಕ್ರಮ ವಹಿಸಲು, ಹಾಗೂ ಉತ್ಸವದ ಕವಿಗೋಷ್ಠಿಗಾಗಿ ಪ್ರತ್ಯೇಕ ಸಮಿತಿ ರಚಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮೆರವಣಿಗೆ, ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉತ್ಸವ ಸಂದರ್ಭದಲ್ಲಿ ಕನಕಗಿರಿ ಪಟ್ಟಣ, ದೇವಸ್ಥಾನ, ವೇದಿಕೆ ಮಾರ್ಗ ಹಾಗೂ ಐತಿಹಾಸಿಕ ಸ್ಮಾರಕ ಸ್ಥಳಗಳಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಜೆಸ್ಕಾಂ ಅಧಿಕಾರಿಗಳು ಜವಾಬ್ದಾರಿ ತೆಗೆದುಕೊಳ್ಲು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೇಯ, ಎಸ್ಪಿ ಡಾ.ರಾಮ್ ಎಲ್ ಅರಸಿದ್ದಿ, ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು 

== ಉತ್ಸವದ ಈ ಬಾರಿಯ ಕ್ರಿಡಾಕೂಟದಲ್ಲಿ ವಿಶೇಷವಾಗಿ ಹೊನಲು ಬೆಳಕಿನ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾವಳಿಯನ್ನು ಜನರ ಹೆಚ್ಚು ಆಕರ್ಷಣೆಯನ್ನು ಸೆಳೆಯುವ ರೀತಿಯಲ್ಲಿ ಎರಡು ದಿನಗಳ ಕಾಲ ನಡೆಯಬೇಕು. ಜೊತೆಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ಕ್ರಿಕೇಟ್ ಪಂದ್ಯವಾಳಿ ಏರ್ಪಡು, ಸೇರಿದಂತೆ ಉತ್ಸವಕ್ಕೆ ಬರುವ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಸಾರಿಗೆ ಸೌಲಭ್ಯ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು : ಶಿವರಾಜ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವರು.==

Previous Post

ಕೋಳಿ ಶೀತ ಜ್ವರ ಹರಡದಂತೆ ಸೂಕ್ತ ಮುಂಜಾಗೃತೆ : ಜಿಲ್ಲಾಧಿಕಾರಿ ನಲಿನ್ ಅತುಲ್

Next Post

ದೇಶದಲ್ಲಿ ಮೋದಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ನಿಧಿ ಕಾಯ್ದೆ ಜಾರಿ ಮಾಡಲಿ: ಸಚಿವ ಶಿವರಾಜ ತಂಗಡಗಿ 

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!