Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ದೇವದಾಸಿ ಪದ್ಧತಿ ನಿರ್ಮೂಲನೆಗೆ ಶಿಕ್ಷಣ ಅಗತ್ಯ: ನ್ಯಾ. ಮಾಹಂತೇಶ ದರಗದ್

ಕವಲೂರು ಗ್ರಾಮದಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ಉಚಿತ ಕಾನೂನು ಶಿಬಿರ

Hosashake News by Hosashake News
March 7, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ, ಶಿಕ್ಣಣ-ಆರೋಗ್ಯ, ಸಾಮಾಜಿಕ
0
ದೇವದಾಸಿ ಪದ್ಧತಿ ನಿರ್ಮೂಲನೆಗೆ ಶಿಕ್ಷಣ ಅಗತ್ಯ: ನ್ಯಾ. ಮಾಹಂತೇಶ ದರಗದ್
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ : ದೇವದಾಸಿ ಪದ್ಧತಿ ಎಂಬ ಅನಿಷ್ಟ ಪದ್ಧತಿಯನ್ನು ನಿರ್ಮೂಲನೆಯಾಗಲು ಶಿಕ್ಷಣ ಎಂಬುದು ಬಹಳ ಅತ್ಯಂತ ದೊಡ್ಡ ಅಸ್ತ್ರ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾತೇಶ ಸಂಗಪ್ಪ ದರಗದ ಹೇಳಿದರು
ಕವಲೂರು ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ಏರ್ಪಡಿಸಿದ್ದ ಉಚಿತ ಕಾನೂನು ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇವದಾಸಿ ಮಹಿಳೆಯರು ಸಂಕಟವನ್ನು ಮುಚ್ಚಿಟ್ಟುಕೊಂಡು ಎಷ್ಟೇ ನೋವುಗಳಿದ್ದರೂ ಸಹಿತ ಖುಷಿಯಾಗಿ ಇರುತ್ತೀರಿ. ನಿಮಗೆ ಮುಖ್ಯವಾಗಿ ಬೇಕಿರುವುದು ಮಾನಸಿಕ ನೆಮ್ಮದಿ, ಸಮಾಜದಲ್ಲಿ ಗೌರವ. ಮುಂದಿನ ಪೀಳಿಗೆಯವರು ಈ ಪದ್ಧತಿಗೆ ಬಲಿಯಾಗದಿರಲು ಎಲ್ಲರಿಗೂ ಶಿಕ್ಷಣ ದೊರೆಯಬೇಕು. ಯಾರಾದರೂ ದೇವದಾಸಿ ಪದ್ಧತಿಗೆ ಬಿಟ್ಟಿದ್ದೆಯಾದರೆ ಕಾನೂನಿನಡಿ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.

ರವಿಚಂದ್ರ ಮಾಟಲದಿನ್ನಿ ಅವರು ದೇವದಾಸಿ ಸಮರ್ಪಣೆ ನಿಷೇಧ ಕಾಯ್ದೆ-1982 ಮತ್ತು ತಿದ್ಧುಪಡಿ ಅಧಿನಿಯಮ-2009 ರ ಕುರಿತು ಉಪನ್ಯಾಸ ನೀಡಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಇಲಾಖೆಯ ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.  ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಪೂರ್ಣಿಮಾ ಯೋಳಭಾವಿ,ಸಖಿ ಒನ್ ಸ್ಟಾಪ್ ಸೆಂಟರ್ ಆಡಳಿತಾಧಿಕಾರಿ ಯಮುನಾ ಬೆಸ್ತರ್.ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಲ್ಲಮ್ಮ ಬಾಳಪ್ಪ ಬಿಸರಹಳ್ಳಿ,  ಪೋಲಿಸ್ ಇಲಾಖೆಯ ಶಶಿಕಾಂತ್, ಪಂಚಾಯಿತಿಯ ಉಪಾಧ್ಯಕ್ಷರಾದ ಅನ್ನಪೂರ್ಣ ಪೂಜಾರಿ, ಪಿಡಿಓ ಅನಿತಾ ಕಿಲ್ಲೇದ, ಯೋಜನಾ ಅನುಷ್ಠಾಧಿಕಾರಿ ರೇಣುಕಾ ಮಠದ, ಸ್ನೇಹಾ ಸಂಸ್ಥೆಯ ಶೋಭಾ ಮಠದ ಸೇರಿದಂತೆ ಅಂಗನವಾಡಿ ಮೇಲ್ವಿಚಾರಕಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯೋಜನಾ ಅನುಷ್ಠಾಧಿಕಾರಿ ದಾದೇಸಾಬ ಹಿರೇಮನಿ ನಿರ್ವಹಿಸಿದರು. ಪ್ರಾರ್ಥನೆಯನ್ನು ಅಂಗನವಾಡಿ ಕಾರ್ಯಕರ್ತೆ ಮಾಡಿದರು.

Previous Post

ರಾಜ್ಯದಲ್ಲಿ ಪರ್ಯಾಯ ರಾಜಕೀಯ ಪಕ್ಷದ ಅಗತ್ಯವಿದೆ ಕೋಡಿಹಳ್ಳಿ ಚಂದ್ರಶೇಖರ್

Next Post

ಮಾ. 12 ರಂದು ಯಲಬುರ್ಗಾದಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಮೊರೆರ ಬೆಟ್ಟಗಳನ್ನು ವಿಶ್ವ ಪಾರಂಪರಿಕ ತಾಣಗಳನ್ನಾಗಿ ಮಾಡಲಾಗುವುದು- ಸಚಿವ ಎಚ್.ಕೆ. ಪಾಟೀಲ್

ಕೊಪ್ಪಳ ಜಿ.ಪಂ. ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ

ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

ಡಾ. ಫ.ಗು.ಹಳಕಟ್ಟಿ,  ಹಡಪದ ಅಪ್ಪಣ್ಣ ಜಯಂತಿಗೆ ಅಗತ್ಯ ಸಿದ್ಧತೆ – ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

ಜಿ. ಪಂ ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ

ಕೊಪ್ಪಳ ಜಿಲ್ಲಾಧಿಕಾರಿಗಳಾಗಿ ಡಾ. ಸುರೇಶ್ ಬಿ ಇಟ್ನಾಳ ಅಧಿಕಾರ ಸ್ವೀಕಾರ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!