Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಸರ್ವರಿಗೂ ಸಮಪಾಲಿನ‌ ಬಜೆಟ್ ; ಸಚಿವ ಶಿವರಾಜ್ ತಂಗಡಗಿ

ಮುಖ್ಯಮಂತ್ರಿಗಳು ಅಭಿಪ್ರಾಯ ಸಂಗ್ರಹಿಸಿ ಬಜೆಟ್ ಮಂಡಿಸಿದ್ದಾರೆ. ಇದೊಂದು ಜನಪರವಾದ ಬಜೆಟ್ ಆಗಿದೆ-ತಂಗಡಗಿ

Hosashake News by Hosashake News
March 7, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜಕೀಯ, ರಾಜ್ಯ
0
ಸರ್ವರಿಗೂ ಸಮಪಾಲಿನ‌ ಬಜೆಟ್ ; ಸಚಿವ ಶಿವರಾಜ್ ತಂಗಡಗಿ
Share on FacebookShare on Twitter

ಹೊಸಶಕೆ ನ್ಯೂಸ್- -ಕೊಪ್ಪಳ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆಯ 16ನೇ ಆಯವ್ಯಯ ಸರ್ವರಿಗೂ ಸಮಪಾಲಿನ ಬಜೆಟ್ ಆಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಮಂಡಿಸಿರುವ ಬಜೆಟ್ ಐತಿಹಾಸಿಕವಾಗಿದ್ದು, ಆರ್ಥಿಕ ಶಿಸ್ತಿನಿಂದ ಕೂಡಿದೆ. ಸರ್ವರಿಗೂ ಸಮತೋಲಿತವಾದ ಬಜೆಟ್ ಆಗಿದ್ದು, ಜನಕೇಂದ್ರಿತ ಕಲ್ಯಾಣ ಕಾರ್ಯಕ್ರಮಗಳ ಬಜೆಟ್ ಇದಾಗಿದೆ ಎಂದಿದ್ದಾರೆ.  ಇನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಐಎಎಸ್, ಐಪಿಎಸ್, ಕೆಎಎಸ್ ಮತ್ತು ಕೆಎಸ್ ಪಿಎಸ್  ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರು ನಗರದಲ್ಲಿ ಎರಡು ಸುಸಜ್ಜಿತ ವಸತಿ ನಿಲಯಗಳನ್ನು ಪ್ರಾರಂಭಿಸುವುದಾಗಿ ಮುಖ್ಯಮಂತ್ರಿಗಳಿಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.‌

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಕೈಗಾರಿಕಾ ನಿವೇಶನ/ಜಮೀನುಗಳನ್ನು ಮಂಜೂರು ಮಾಡುವಾಗ ಪ್ರತಿ ಕೈಗಾರಿಕಾ ಪ್ರದೇಶದ ಹಂಚಿಕೆಯಲ್ಲಿ, ಹಿಂದುಳಿದ ವರ್ಗಗಳ ಪ್ರವರ್ಗ -1, ಪ್ರವರ್ಗ -2 ಎ ಮತ್ತು 2ಬಿ ಸಮುದಾತಗಳಿಗೆ ಶೇ.20  ರಷ್ಟು ಭೂಮಿ ಖರೀದಿಗೆ ಅವಕಾಶ, 7.ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರು ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ.ಅನುದಾನವನ್ನು ಒದಗಿಸುವುದು ಒಗಿಸುವುದು ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಅನ್ನದಾತರಿಗಾಗಿ ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ, ತೊಗರಿ ಉತ್ಪಾದನೆ ‌ಉತ್ತೇಜನಕ್ಕೆ ನೆರವು, ಹೈನುಗಾರಿಕೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಮೂಲಸೌಲಭ್ಯ, ಕೈಗಾರಿಕೆ, ಶಿಕ್ಷಣ, ಮಹಿಳಾ ಸಬಲೀಕರಣ ಸೇರಿದಂತೆ ಎಲ್ಲಾ ಇಲಾಖೆಗಳಿಗೆ ಆದ್ಯತೆ ನೀಡಲಾಗಿದೆ.

ಒಟ್ಟಾರೆ ಎಲ್ಲ ವಯಲಗಳಿಗೂ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಬಜೆಟ್ ತಯಾರಿ ವೇಳೆ ರೈತರು ಸೇರಿದಂತೆ ಎಲ್ಲ ವರ್ಗದವರಿಂದ ಮುಖ್ಯಮಂತ್ರಿಗಳು ಅಭಿಪ್ರಾಯ ಸಂಗ್ರಹಿಸಿ ಬಜೆಟ್ ಮಂಡಿಸಿದ್ದಾರೆ. ಇದೊಂದು ಜನಪರವಾದ ಬಜೆಟ್ ಆಗಿದೆ. ವಿಪಕ್ಷಗಳು ಪಂಚ ಗ್ಯಾರಂಟಿಗಳ ಬಗ್ಗೆ ಇಲ್ಲ-ಸಲ್ಲದ ಹೇಳಿಕೆ ನೀಡುತ್ತಿದ್ದವು. ಮುಖ್ಯಮಂತ್ರಿಗಳು  ಗ್ಯಾರಂಟಿಗಳ ಅನುದಾನದ ಜತೆಗೆ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ಒದಗಿಸಿದ್ದಾರೆ. ಬಜೆಟ್ ನಲ್ಲಿ ಆರ್ಥಿಕ ಶಿಸ್ತನ್ನು ಕಾಪಾಡಿದ್ದು, ಇದೊಂದು  ಸಾಮಾಜಿಕ ನ್ಯಾಯವನ್ನು ಒದಗಿಸುವ ಬಜೆಟ್ ಎಂದು ತಿಳಿಸಿದ್ದಾರೆ.

Previous Post

4 ಲಕ್ಷ ಕೋಟಿ ರೂ.ಗಳ ಮೀರಿದ ಆಯವ್ಯಯ ಹೊಸ ಮೈಲಿಗಲ್ಲು: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕೊಪ್ಪಳ ಜಿಲ್ಲೆಗೆ ಹೇಳಿಕೊಳ್ಳುವಂತ ಯೋಜನೆ ಘೋಷಿಸಿಲ್ಲ : ಡಾ. ಬಸವರಾಜ ಕ್ಯಾವಟರ್

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!