Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಟಣಕನಕಲ್: ಪಿಎಂ ವಿಶ್ವಕರ್ಮ ಯೋಜನೆಯ ಜಾಗೃತಿ ಅಭಿಯಾನ

Hosashake News by Hosashake News
March 8, 2025
in ಜಿಲ್ಲೆ, ದೇಶ, ಪರಿಸರ, ಪ್ರಾದೇಶಿಕ, ರಾಜ್ಯ
0
ಟಣಕನಕಲ್: ಪಿಎಂ ವಿಶ್ವಕರ್ಮ ಯೋಜನೆಯ ಜಾಗೃತಿ ಅಭಿಯಾನ
Share on FacebookShare on Twitter

ಹೊಸಶಕೆ ನ್ಯೂಸ್ -ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಹುಬ್ಬಳ್ಳಿಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಮ್.ಎಸ್.ಎಮ್.ಇ)ರವರ ಸಹಯೋಗದೊಂದಿಗೆ ಟಣಕನಕಲ್ ಗ್ರಾಮದಲ್ಲಿರುವ ಕೊಪ್ಪಳ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾದ ಪಿಎಂ ವಿಶ್ವಕರ್ಮ ಯೋಜನೆಯ ಜಾಗೃತಿ ಅಭಿಯಾನ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.

ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಕೆ.ಗವಿಶಂಕರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ದ್ರ ಪುರಸ್ಕೃತ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯು ದೇಶದ ಸಾಂಪ್ರದಾಯಿಕ ಕೆಲೆಗಳಿಗೆ ಉತ್ತೇಜ ನೀಡುವುದರ ಮೂಲಕ ಕುಶಲಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸಲಾಗುತ್ತಿದೆ. ಕಾರ್ಯಕ್ರಮದ ಮೂಲಕ ತಾಂತ್ರಿಕ ಜ್ಞಾನ ಹಾಗೂ ಬ್ಯಾಂಕಿನ ಮೂಲಕ ಸಿಗುವಂತಹ ಸಾಲ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ಅಭಿಯಾನಕ್ಕೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಎಮ್.ಎಸ್.ಎಮ್.ಇ ಸಹಾಯಕ ನಿರ್ದೆಶಕ ಕಿರಣ ಕುಮಾರ್, ಪಿ.ಎಂ ವಿಶ್ವಕರ್ಮ ಜಿಲ್ಲಾ ವ್ಯವಸ್ಥಾಪಕ ಚಂದ್ರಶೇಖರ್, ಜಿಲ್ಲಾ ಕೌಶಲ್ಯ ಮಿಷನ್ ಸಹಾಯಕ ನಿರ್ದೇಶಕ ಮಂಜುನಾಥ ಬೆಲ್ಲದ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ವಿರೇಂದ್ರ ಕುಮಾರ, ತಳಕಲ್‌ನ ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ಕೌಶಲ್ಯ ಕೇಂದ್ರದ ರಾಜೇಶ್ವರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತರಬೇತಿದಾರರು, ವಿಶ್ವಕರ್ಮ ಸಮಾಜದ ಪದಾದಿಕಾರಿಗಳು, ವಿಶ್ವಕರ್ಮ ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Tags: Hosashake Karnataka KoppalhosashakePressKarnatakaKoppalPM Vishavkarma Abhiyanಟಣಕನಕಲ್: ಪಿಎಂ ವಿಶ್ವಕರ್ಮ ಯೋಜನೆಯ ಜಾಗೃತಿ ಅಭಿಯಾನ
Previous Post

ಅಂತರಾಷ್ಟ್ರೀಯ ಮಟ್ಟದ ಗ್ರೀನ್‌ಕಾಲೇಜ್-ಕ್ಲೀನ್‌ಕಾಲೇಜ್’ ಸ್ಪರ್ಧೆಯಲ್ಲಿ ಬಹುಮಾನ

Next Post

ಕೊಪ್ಪಳಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ.ಪ್ರಭಾಕರ್ ಆಗಮನ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!