ಹೊಸಶಕೆ ನ್ಯೂಸ್-ಕೊಪ್ಪಳ:
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ತಹಶಿಲ್ದಾರ ವಿನಾಯಕ್ ಗೋಡಬೊಲೆ ಹಾಗೂ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ ಕಟ್ಟಿಮನಿ, ಮುಖಂಡರು ಹಾಗೂ ಸದಸ್ಯರಾದ ನಾಗರಾಜ ಕನಕಗಿರಿ, ಗಿರೀಶ್ ಕನಕಗಿರಿ, ರವಿ ಕನಕಗಿರಿ, ವರಲಕ್ಷ್ಮಿ ಚಿಂತಪಲ್ಲಿ, ವಿನಯ ಕಟ್ಟಿಮನಿ, ನಾಗರತ್ನ ಕನಕಗಿರಿ, ಸರೋಜ ಶಿಂಧೆ, ಆಂಜನೇಯ, ಅಶೋಕ ಹುಣಶಿಗಿಡದ, ವೆಂಕಟೇಶ್ ಕಟ್ಟಿಮನಿ, ಗುರು ಹುಣಶಿಗಿಡದ ಸೇರಿದಂತೆ ಇನ್ನೂ ಹಲವಾರು ಮತ್ತು ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.