Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ದಿ. ಕೆ.ಹೆಚ್. ಪಾಟೀಲರು ಕನ್ನಡ ನಾಡಿನ ಹೆಮ್ಮೆಯ ಜನಮೆಚ್ಚಿನ ನಾಯಕ : ಸಿದ್ದರಾಮಯ್ಯ

Hosashake News by Hosashake News
March 16, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜಕೀಯ, ರಾಜ್ಯ, ಸುದ್ದಿ
0
ದಿ. ಕೆ.ಹೆಚ್. ಪಾಟೀಲರು ಕನ್ನಡ ನಾಡಿನ ಹೆಮ್ಮೆಯ ಜನಮೆಚ್ಚಿನ ನಾಯಕ : ಸಿದ್ದರಾಮಯ್ಯ
Share on FacebookShare on Twitter

*ಸಹಕಾರಿ ರಂಗಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ ಕೆ.ಹೆಚ್. ಪಾಟೀಲರು ನಿಷ್ಠುರವಾದಿ  ಹಾಗೂ ಪ್ರಾಮಾಣಿಕ ರಾಜಕಾರಣಿ ಸಿಎಂ ಸಿದ್ದರಾಮಯ್ಯ

ಹೊಸಶಕೆ ನ್ಯೂಸ್-ಬೆಂಗಳೂರು :

ಮಾಜಿ ಸಚಿವರು, ದಿವಂಗತ ಕೆ.ಹೆಚ್.ಪಾಟೀಲರು ಕನ್ನಡ ನಾಡಿನ ಹೆಮ್ಮೆಯ ಜನ ಮೆಚ್ಚಿನ ನಾಯಕರು  ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು

ಮಾಜಿ ಸಚಿವ ಕೆ.ಎಚ್. ಪಾಟೀಲರ ಜನ್ಮಶತಮಾನೋತ್ಸವ ಮತ್ತು ಗದಗ ಕೋ ಆಪರೇಟೀವ್ “ಕಾಟನ್ ಸೇಲ್ಸ್ ಸೊಸೈಟಿಯ ನೂತನ ಕಟ್ಟಡ”ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿತ್ತು ಆದರೆ ವೈದ್ಯಕೀಯ ಕಾರಣಗಳಿಂದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದಿರುವ ಹಿನ್ನಲೇಯಲ್ಲಿ ಈ ಕುರಿತು ಸಂದೇಶ ನೀಡಿರುವ ಮುಖ್ಯಂತ್ರಿಗಳು, ಸಹಕಾರಿ ರಂಗಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ ಕೆ.ಹೆಚ್. ಪಾಟೀಲರು ನಿಷ್ಠುರವಾದಿ  ಹಾಗೂ ಪ್ರಾಮಾಣಿಕ ರಾಜಕಾರಣಿ ಎಂದೇ ಜನಜನಿತರರಾಗಿದ್ದರು ಎಂದು ಬಣ್ಣಿಸಿದ್ದಾರೆ.

ಗದುಗಿನ ಹುಲಕೋಟಿಯ ಗ್ರಾಮೀಣ ಸೊಗಡಿನೊಂದಿಗೆ ಬೆಳೆದ ಪಾಟೀಲರು ಶಾಸಕರಾಗಿ, ಸಚಿವರಾಗಿ, ಸಹಕಾರಿ ಧುರೀಣರಾಗಿ ಬೆಳದ ಪರಿ ಅನನ್ಯ. ಕೆ.ಎಚ್. ಪಾಟೀಲರು ವ್ಯಾವಹಾರಿಕ ಅರ್ಥದ ರಾಜಕಾರಣಿಯಾಗಿರಲಿಲ್ಲ.  ಅವರೊಬ್ಬ ದಾರ್ಶನಿಕ ಧುರೀಣರಾಗಿದ್ದರು. ರಾಜಕಾರಣಿಗಳು ಮುಂದಿನ ಚುನಾವಣೆಯ ಬಗ್ಗೆ ಯೋಚಿಸಿದರೆ, ದಾರ್ಶನಿಕ ಮುಂದಿನ ಜನಾಂಗದ ಬಗ್ಗೆ ಯೋಚಿಸುತ್ತಾರೆ.

ಕೆ.ಎಚ್. ಪಾಟೀಲರು,  ಭವಿಷ್ಯವನ್ನು ಉತ್ತಮಗೊಳಿಸುವ ರೈತರ ಹಿತ ಕಾಪಾಡುವ, ಶೋಷಣೆ ಮುಕ್ತ ಸಮಾಜ ನಿರ್ಮಾಣ ಮಾಡುವ ಆಶಯವನ್ನು ಸದಾ ಹೊಂದಿದ್ದರು. ತಮ್ಮ ಆದರ್ಶಗಳಿಂದಾಗಿ ಅವರು ಇತರರಿಗೆ ಅನುಕರಣೀಯರಾಗಿದ್ದರು.  ಸಚಿವರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪಾಟೀಲರು, ಸಂಘಟನಾ ಚತುರರು ಹಾಗೂ ಆಡಳಿತದಲ್ಲಿ ನಿಪುಣರಾಗಿದ್ದರು. ಜನಹಿತವನ್ನೇ ಕಾಯಕವಾಗಿಸಿಕೊಂಡಿದ್ದ ಕೆ.ಎಚ್. ಪಾಟೀಲರ ನೇತೃತ್ವದಲ್ಲಿ ರಾಜ್ಯದ ಸಹಕಾರಿ  ಕ್ಷೇತ್ರ ಸದೃಢ ಬೆಳವಣಿಗೆಯನ್ನು ಕಂಡಿತು.

ದೇಶದ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರವಾಗಿದ್ದು, ಈ ಕ್ಷೇತ್ರಕ್ಕೆ ಗದುಗಿನ ಗ್ರಾಮವೊಂದರಲ್ಲೇ ಮುನ್ನುಡಿ ಬರೆಯಲಾಗಿದ್ದು ವಿಶೇಷ.  ಗದುಗಿನ ಜಿಲ್ಲೆಯಿಂದ ಕೃಷಿ, ಹೈನುಗಾರಿಕೆ, ಸ್ವಸಹಾಯ ಸಂಘಗಳಿಗೆ ಸಹಕಾರಿ ಚಳವಳಿಯನ್ನು ರಾಜ್ಯದೆಲ್ಲೆಡೆ ವಿಸ್ತರಿಸಿದ ಪಾಟೀಲರು, ಶ್ರಮಿಕರ ಆರ್ಥಿಕ ಸ್ಥಿತಿಯ ಸುಧಾರಣೆಯಲ್ಲಿ ಪ್ರಮುಖ   ಪಾತ್ರ ವಹಿಸಿದರು.

ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಪಾಟೀಲರು, ದಿ.ಗದಗ ಕೋ-ಆಪ್‍ಟಿವ್ ಕಾಟನ್ ಸೇಲ್ ಸೊಸೈಟಿಯನ್ನು ನೈಜವಾದ ಅರ್ಥದಲ್ಲಿ ರೈತಪರ ಸಂಸ್ಥೆಯನ್ನಾಗಿ ಮಾಡಿ, ಎ.ಪಿ.ಎಂ.ಸಿ. ಮಾರುಕಟ್ಟೆಯಲ್ಲಿ ರೈತರಿಗಾಗುತ್ತಿದ್ದ ಶೋಷಣೆ ತಡೆಯಲು ಹಲವು ಅನುಕರಣೀಯ ಕ್ರಮಗಳನ್ನು ಕೈಗೊಂಡರು. ಅಂತೆಯೇ, ಎಲ್ಲ ಹಳ್ಳಿಗಳಿಗೆ ಉಗ್ರಾಣ ಕಟ್ಟಿಸಿದ್ದರು.

ಕೃಷಿ ವಿಜ್ಞಾನ ಕೇಂದ್ರ ಸ್ಥಾಪನೆ, ಕೃಷಿಯಲ್ಲಿ ನೂತನ ತಂತ್ರಜ್ಞಾನ ಬಳಕೆ, ಮಣ್ಣು ಮತ್ತು ನೀರಿನ ಸಂರಕ್ಷಣೆ, ಸಾವಯವ ಕೃಷಿ ಬೆಳೆಗಳಿಗೆ ಮಾರುಕಟ್ಟೆ ವ್ಯವಸ್ಥೆ, ಕೃಷಿಕರಿಗೆ ತರಬೇತಿಯಂತಹ ಕಾರ್ಯಕ್ರಮಗಳು, ಪಾಟೀಲರ ರೈತಪರ ಕಾಳಜಿಗೆ ಕನ್ನಡಿ ಹಿಡಿದಿವೆ.  ಕೈಗಾರಿಕೆ, ಶಾಲಾ-ಕಾಲೇಜು, ಆಸ್ಪತ್ರೆಗಳನ್ನು ನಿರ್ಮಿಸಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವರು ಕಾರಣಕರ್ತರಾದರು.  ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಸಂಕಲ್ಪದೊಂದಿಗೆ ಅನೇಕ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿರುವ ಹೆಗ್ಗಳಿಕೆ ಪಾಟೀಲರದ್ದು.

1970ರ ದಶಕದಲ್ಲಿ ದೇವರಾಜ ಅರಸು ಅವರ ನೇತೃತ್ವದ ಸಂಪುಟದಲ್ಲಿ ಕೆ.ಹೆಚ್. ಪಾಟೀಲರು ಅರಣ್ಯ ಸಚಿವರಾಗಿದ್ದರು. ಮೈಸೂರಿನ ಹೆಚ್.ಡಿ. ಕೋಟೆಯಲ್ಲಿ ಜನರಿಂದ ಅವ್ಯಾಹತವಾಗಿ ಅರಣ್ಯ ನಾಶವನ್ನು ಕಂಡ ಪಾಟೀಲರು ಮರ ಕಡಿಯುವುದನ್ನು ನಿಷೇಧಿಸಲು ಆ ಸಂದರ್ಭದಲ್ಲಿ ಬಿಗಿ ಕಾನೂನುಗಳನ್ನು ತಂದರು.

ಅಂದಿನ ಕಾಲದಲ್ಲಿ ಕಾಡು ಭೂಮಿಯ ಮೇಲೆ ಅರಣ್ಯ ಸಚಿವರಾಗಿದ್ದವರಿಗಿದ್ದ ವ್ಯಕ್ತಿಗತ ಅಧಿಕಾರವನ್ನು ಶಾಸನಸಭೆಗೆ ಹಸ್ತಾಂತರಿಸುವ ಮಹತ್ತರ ಕಾನೂನನ್ನು ಜಾರಿಗೆ ಮಾಡಿದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾಟೀಲರು ಕಾರಣರಾದರು.  ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಅಪಾರ ಕಾಳಜಿ ವಹಿಸಿದ್ದ ಕೆ.ಹೆಚ್.ಪಾಟೀಲರ ದಿಟ್ಟತನದಿಂದ ರಾಜ್ಯದ ಕಾಡುಗಳು ಇನ್ನೂ ಹಚ್ಚಹಸಿರಾಗಿಯೇ ಉಳಿದಿದೆ.

            ನಮ್ಮ ರಾಜ್ಯವನ್ನು ‘ಕರ್ನಾಟಕ ರಾಜ್ಯ’ ಎಂದು ಅಧಿಕೃತವಾಗಿ ಘೋಷಿಸುವ ನಾಮಕರಣೋತ್ಸವ ಸಮಿತಿಗೆ ಕೆ.ಎಚ್. ಪಾಟೀಲರವರು ಅಧ್ಯಕ್ಷರಾಗಿದ್ದರು.  ಗಾಂಧಿಜೀಯವರ ಆಶಯ ಹಾಗೂ ಮಾಜಿ ಪ್ರಧಾನಿ ಮನಮೋಹನ್‍ಸಿಂಗ್ ಅವರ ದೂರದೃಷ್ಟಿಯ ಪರಿಣಾಮವಾಗಿ ರಾಷ್ಟ್ರಮಟ್ಟದಲ್ಲಿ ಸಹಕಾರ ಸಂಘಗಳು ಇಂದು ಬೆಳೆದು ನಿಂತಿವೆ.  ಕೆ.ಹೆಚ್. ಪಾಟೀಲರಂತಹ ಸಮರ್ಥ ನಾಯಕರು ಕಟ್ಟಿಬೆಳೆಸಿದ ಸಹಕಾರಿ ಕ್ಷೇತ್ರವನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಯುವಪೀಳಿಗೆಯೂ ಮುಂದೆ ಬರಬೇಕಿದೆ.

ಶೋಷಣೆ ಮುಕ್ತ ಸಮಾಜ, ಸಾಮಾಜಿಕ ನ್ಯಾಯ ಹಾಗೂ ಸರ್ವರಿಗೂ ಸಮಬಾಳು ಮತ್ತು ಸಮಪಾಲು ಎಂಬ ಆದರ್ಶದವನ್ನು ಸಾಕಾರಗೊಳಿಸಲು ತಮ್ಮ ಜೀವಿತಾವಧಿಯನ್ನೇ ಮುಡುಪಾಗಿಟ್ಟ ಕೆ.ಹೆಚ್. ಪಾಟೀಲರಂತಹ ಮಹಾನ್ ನಾಯಕರು ನಮಗೆಲ್ಲರಿಗೂ ಪ್ರೇರಣಾ ಶಕ್ತಿಯಾಗಿದ್ದಾರೆ.  ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಕನಸು ಹೊತ್ತು ಶ್ರಮಿಸುತ್ತಿರುವ ಸರ್ಕಾರದ ಗುರಿ ಸಾಧನೆಗೆ ಕೆ.ಹೆಚ್. ಪಾಟೀಲರು ಬಿಟ್ಟುಹೋದ ಆದರ್ಶಗಳು ನಮಗಿಂದು ದಾರಿದೀಪವಾಗಿದೆ.

ಈ ನಿಟ್ಟಿನಲ್ಲಿ ಗದುಗಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಶ್ರೀ ಕೆ.ಎಚ್ ಪಾಟೀಲರ ಹೆಸರನ್ನು ನಾಮಕರಣ ಮಾಡಲು ನಮ್ಮ ಸರ್ಕಾರ ಕ್ರಮವಹಿಸಲಿದೆ.  ಸಮಾಜದ ಒಳಿತಿಗಾಗಿ ಶ್ರಮಿಸುವ ಕೆ.ಹೆಚ್.ಪಾಟೀಲರ ಗುಣ ವ್ಯಕ್ತಿತ್ವಗಳನ್ನು ಮೈಗೂಡಿಸಿಕೊಂಡಿರುವ ಅವರ ಮಗನಾದ ಶ್ರೀಯುತ ಹೆಚ್.ಕೆ. ಪಾಟೀಲರ ದೂರದೃಷ್ಟಿಯ ಯೋಜನೆಗಳು, ರಾಜ್ಯದ ಏಳಿಗೆಗೆ ಪೂರಕವಾಗಿರುವುದು ಶ್ಲಾಘನೀಯ. ಸತ್ಯಸಂಧತೆ, ಸರಳತೆ, ಆತ್ಮವಿಶ್ವಾಸ, ಧೈರ್ಯ ಪರಿಶ್ರಮಗಳ ಸಾಕಾರಮೂರ್ತಿಯಾಗಿದ್ದ          ಕೆ.ಹೆಚ್. ಪಾಟೀಲರ ಬದುಕು ಸಾಧನೆಗಳು ಯುವಪೀಳಿಗೆಗೆ ಎಂದಿಂದಿಗೂ ಆದರ್ಶಪ್ರಾಯವಾಗಿರಲಿ ಎಂದು ಹಾರೈಸಿರುವರು.

== ಸಹಕಾರಿ ಕ್ಷೇತ್ರದ ಮೂಲಕ ಯುವಪೀಳಿಗೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ಹತ್ತು ಹಲವು ಯೋಜನೆಗಳನ್ನು ಸರ್ಕಾರ ಕೈಗೊಂಡಿದೆ.  ಈ ಯೋಜನೆಯ ಲಾಭ ಪಡೆದು ಜನರು ಆರ್ಥಿಕವಾಗಿ ಸಬಲರಾಗುವ ಜೊತೆಗೆ ರಾಜ್ಯದ ಅಭಿವೃದ್ಧಿಗೂ ಕೈಜೋಡಿಸಲೆಂದು  ಹಾರೈಸುತ್ತೇನೆ: ಸಿದ್ದರಾಮಯ್ಯ, ಮುಖ್ಯಮಂತ್ರಿಗಳು==

Tags: * ಸಹಕಾರಿ ರಂಗಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ. ಪಾಟೀಲರು ನಿಷ್ಠುರC M KarnatakaCM SiddaramaiahK.H. Patil is a proud and beloved leader of Kannada Nadu: CMKarnataka CMSiddaramayy CMThe. K.H. Patil is a proud and beloved leader of Kannada Nadu: Siddaramaiahಪ್ರಾಮಾಣಿಕ ರಾಜಕಾರಣಿ-ಸಿಎಂಸಹಕಾರಿ ರಂಗಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ. ಪಾಟೀಲರು ನಿಷ್ಠುರ
Previous Post

ಭಾಷೆ, ನೆಲ-ಜಲದ ಬಗ್ಗೆ ಜಾಗೃತಿ ಮೂಡಿಸಲು ಸಾಹಿತ್ಯ ಸಮ್ಮೇಳನಗಳು ಅವಶ್ಯ ಶಾಸಕ ಹಿಟ್ನಾಳ

Next Post

ಪ್ರೀತಿ ಸಾಮಾನ್ಯರನ್ನು….

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!