Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಅ.ಕ.ಬ್ರಾಹ್ಮಣ ಮಹಾಸಭಾ ಚುನಾವಣೆ:ಕೊಪ್ಪಳ ಜಿಲ್ಲಾ ಪ್ರತಿನಿಧಿಯಾಗಿ ಗುರುರಾಜ ಜೋಶಿ

Hosashake News by Hosashake News
April 13, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ, ಸುದ್ದಿ
0
ಅ.ಕ.ಬ್ರಾಹ್ಮಣ ಮಹಾಸಭಾ ಚುನಾವಣೆ:ಕೊಪ್ಪಳ ಜಿಲ್ಲಾ ಪ್ರತಿನಿಧಿಯಾಗಿ ಗುರುರಾಜ ಜೋಶಿ
Share on FacebookShare on Twitter

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ

ಹೊಸಶಕೆ ನ್ಯೂಸ್-ಕೊಪ್ಪಳ:  ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘಟನೆಯ ನೂತನ ಜಿಲ್ಲಾ ಪ್ರತಿನಿಧಿಯಾಗಿ ಕೊಪ್ಪಳದ ಗುರುರಾಜ ಜೋಶಿ 140 ಮತಗಳ ಅಂತರದಿಂದ ಗೆಲುವು ಪಡೆದು ಭಾನುವಾರ ಆಯ್ಕೆಯಾಗಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಭಾನುಪ್ರಕಾಶ ಶರ್ಮಾ ಬಣದಿಂದ ಗುರುರಾಜ ಜೋಶಿ ಹಾಗೂ ಎಸ್‌. ರಘುನಾಥ್‌ ಬಣದಿಂದ ಪ್ರಾಣೇಶ ಮಾದಿನೂರು ಅವರು ಜಿಲ್ಲಾಪ್ರತಿನಿಧಿ ಸ್ಥಾನಕ್ಕೆ ಕಣಕ್ಕಿಳಿದಿದ್ದರು. ಗುರುರಾಜ ಅವರಿಗೆ 449 ಮತ್ತು ಪ್ರಾಣೇಶ್ ಅವರಿಗೆ 309 ಮತಗಳು ಲಭಿಸಿದವು. 29 ಮತಗಳು ತಿರಸ್ಕೃತವಾದವು.

ಮೊದಲ ಬಾರಿಗೆ ಜಿಲ್ಲೆಯಲ್ಲಿ ನಡೆದ ಮತದಾನದಲ್ಲಿ ಒಟ್ಟು 1,190 ಮತದಾರರು ಇದ್ದರು. ಇದರಲ್ಲಿ 787 ಮತಗಳು ಚಲಾವಣೆಯಾದವು. ಇಲ್ಲಿನ ಸರ್ಕಾರಿ ನೌಕರರ ಭವನದ ಎದುರು ಇರುವ ಬ್ರಾಹ್ಮಣ ಸದಾಚಾರ ಸದನದಲ್ಲಿ ಭಾನುವಾರ ಬೆಳಿಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ ನಾಲ್ಕು ಗಂಟೆ ತನಕ ಮತದಾನ ನಡೆಯಿತು. ಜಿಲ್ಲಾಕೇಂದ್ರ ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಮತದಾರರು ಹಕ್ಕು ಚಲಾಯಿಸಿದರು.ಸಂಜೆ ಆರು ಗಂಟೆ ಸುಮಾರಿಗೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಗುರುರಾಜ ಜೋಶಿ ಬಣದವರು ಸಂಭ್ರಮಾಚರಣೆ ಮಾಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗುರುರಾಜ ’ಸಮಾಜದ ಎಲ್ಲ ಹಿರಿಯರ ಆಶೀರ್ವಾದದಿಂದ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿದೆ. ನಮ್ಮ ರಾಜ್ಯ ಸಮಿತಿಯ ಮುಖಂಡರು ನೀಡುವ ಸೂಚನೆಯನ್ವಯ ಜಿಲ್ಲೆಯಲ್ಲಿ ಸಮುದಾಯದ ಸಂಘಟನೆ ಹಾಗೂ ಜನರ ಅಭಿವೃದ್ಧಿಗೆ ಕೆಲಸ ಮಾಡುವೆ’ ಎಂದು ಹೇಳಿದರು.

ನೆರೆಯ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಜಿಲ್ಲಾಪ್ರತಿನಿಧಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಅಲ್ಲಿನ ಮತದಾರರಿಗೆ ಹಕ್ಕು ಚಲಾಯಿಸಲು ಈ ಬಾರಿ ಇಲ್ಲಿಯೇ ವ್ಯವಸ್ಥೆ ಮಾಡಿದ್ದು ವಿಶೇಷವಾಗಿತ್ತು.

Tags: A.K. Brahmin Mahasabha elections: Gururaja Joshi as Koppal district representativeಅ.ಕ.ಬ್ರಾಹ್ಮಣ ಮಹಾಸಭಾ ಚುನಾವಣೆ:ಕೊಪ್ಪಳ ಜಿಲ್ಲಾ ಪ್ರತಿನಿಧಿಯಾಗಿ ಗುರುರಾಜ ಜೋಶಿ
Previous Post

ಏ. 17 ರಂದು ಜಾತಿ ಗಣತಿ ವರದಿ ವಿಸ್ತೃತವಾಗಿ ಚರ್ಚೆ : ಸಚಿವ ಶಿವರಾಜ ತಂಗಡಗಿ

Next Post

ಬ್ರಾಹ್ಮಣ ಮಹಾಸಭಾ ಚುನಾವಣೆ: ರಾಜ್ಯಾಧ್ಯಕ್ಷರಾಗಿ ಎಸ್.ರಘುನಾಥ್ ಆಯ್ಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!