Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ತರಬೇತಿ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

Hosashake News by Hosashake News
August 5, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ
0
ತರಬೇತಿ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
Share on FacebookShare on Twitter

ಗ್ರೂಫ್ ಸಿ ಲಿಪಿಕ ವೃಂದದ ಪ್ರಶಿಕ್ಷಾರ್ಥಿಗಳಿಗೆ ಸಾಮಾನ್ಯ ಬುನಾದಿ ತರಬೇತಿ

ಹೊಸಶಕೆ ನ್ಯೂಸ್-ಕೊಪ್ಪಳ: ಜಿಲ್ಲಾ ತರಬೇತಿ ಸಂಸ್ಥೆ ವತಿಯಿಂದ 42 ದಿನಗಳ ಕಾಲ ಹಮ್ಮಿಕೊಂಡಿರು ಸಾಮಾನ್ಯ ಬುನಾದಿ ತರಬೇತಿ ಕಾರ್ಯಕ್ರಮದ ಸದುಪಯೋಗವನ್ನು ಗ್ರುಫ್ ಸಿ ವೃಂದದ ಲಿಪಿಕ ಪ್ರಶಿಕ್ಷಾರ್ಥಿಗಳು ಪಡೆದುಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಅವರು ಮಂಗಳವಾರ ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಇತ್ತಿಚೆಗೆ ಆಯ್ಕೆಯಾದ ಗ್ರೂಫ್ ಸಿ ಲಿಪಿಕ ವೃಂದದ ಪ್ರಶಿಕ್ಷಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಸಾಮಾನ್ಯ ಬುನಾದಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಆಡಳಿತಾತ್ಮಕವಾಗಿ ಹೆಚ್ಚಿನ ಸುಧಾರಣೆಯಾಗಬೇಕಾದರೆ ತಮ್ಮ ತಮ್ಮ ಕಛೇರಿ ವಿಷಯಗಳ ಕುರಿತು ಚೆನ್ನಾಗಿ ತಿಳಿದುಕೊಳ್ಳಬೇಕು ಮತ್ತು ಯಾವುದೆ ಫೈಲಿಗೆ ಸಹಿ ಮಾಡಬೇಕಾದರೆ ಅದನ್ನು ಓದಿ ತಿಳಿದುಕೊಂಡೆ ಮಾಡಬೇಕು. ಗೊತ್ತಿಲ್ಲದ ವಿಷಯಗಳ ಕುರಿತು ಚರ್ಚೆಮಾಡಿ ತಿಳಿದುಕೊಳ್ಳಬೇಕು. 42 ದಿನಗಳ ತರಬೇತಿ ಅವಧಿಯಲ್ಲಿ ತಮ್ಮ ಇಲಾಖೆಗಳ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಹೋಗಬೇಕೆಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮಣ್ಣನವರ್ ಮಾತನಾಡಿ ತರಬೇತಿ ನಮ್ಮ ವೃತ್ತಿ ಜೀವನದ ಕೊನೆ ಕ್ಷಣದವರೆಗೆ ಬೇಕು. ವೃತ್ತಿ ಜೀವನದಲ್ಲಿ ನಾವು ಮೇಲೆ ಬರಬೇಕಾದರೆ ಕೌಶಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಬೇಸಿಕ್ ಗೊತ್ತಿಲ್ಲದಿದ್ದರೆ ನಾವು ಯಾವ ತಂತ್ರಾಂಶ ಕಲಿತರು ಅದು ತಲೆಯಲ್ಲಿ ಹೋಗುವುದಿಲ್ಲ ಹಾಗಾಗಿ ಪ್ರಶಿಕ್ಷಾರ್ಥಿಗಳಿಗೆ ಬುನಾದಿ ತರಬೇತಿ ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೊಪ್ಪಳ ಗ್ರೇಡ್-2 ತಹಶಿಲ್ದಾರ ಗವಿಸಿದ್ದಪ್ಪ ಮಣ್ಣೂರ. ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕರಾದ ಡಾ. ಸುರೇಶ ಜಿ. ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯ ಬೋಧಕರಾದ ಶ್ರೀ ಧರ್ ಮತ್ತು ನರ್ಮದಾ ಸೇರಿದಂತೆ ಗ್ರುಪ್ ಸಿ ಲಿಪಿಕ ವೃಂದದ ಪ್ರಶಿಕ್ಷಾರ್ಥಿಗಳು ಭಾಗವಹಿಸಿದ್ದರು. ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.  ಕೃಷ್ಣಮೂರ್ತಿ ದೇಸಾಯಿ, ಮೈಲಾರ್ ರಾವ್ ಕುಲಕರ್ಣಿ, ಲಾಯಕ್ ಅಲಿ, ಎಂ.ಗುರುರಾಜ ಅವರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.

Tags: Koppal General foundation training for Group C clerical traineesKoppal ಗ್ರೂಫ್ ಸಿ ಲಿಪಿಕ ವೃಂದದ ಪ್ರಶಿಕ್ಷಾರ್ಥಿಗಳಿಗೆ ಸಾಮಾನ್ಯ ಬುನಾದಿ ತರಬೇತಿKoppal ತರಬೇತಿ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರTake advantage of the training program - Additional District Collector Sidrameshwar
Previous Post

ಹೊಸಶಕೆ ದಿನಪತ್ರಿಕೆ

Next Post

ಕೊಪ್ಪಳ ಪ್ರೇಮ ವಿಚಾರಕ್ಕೆ ಗವಿಸಿದ್ದಪ್ಪ ನಾಯಕ ಕೊಲೆ ಪ್ರಕರಣ : ನಾಲ್ಕು ಜನರ ಬಂಧನ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್

ಹೊಸಶಕೆ ದಿನಪತ್ರಿಕೆ

ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ ನೂತನ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್

ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ  ನಡೆದಿದೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ರ್ಯಾಲಿ

ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಜೆಡಿಎಸ್ ನಾಯಕ ಸಿ ವಿ ಚಂದ್ರಶೇಖರ್ ಭೇಟಿ

ಕೊಪ್ಪಳ : ಕೊಲೆಯಾದ ಗವಿಸಿದ್ಧಪ್ಪನ ಮನೆಗೆ ಮುಸ್ಲಿಂ ಸಮಾಜದ ಮುಖಂಡರ ಭೇಟಿ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!