Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಅಗ್ನಿವೀರ್ ಸೇನಾ ಭರ್ತಿ: ಮೊದಲ‌ ದಿನ ಕೊಪ್ಪಳ ಜಿಲ್ಲೆಯ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆ

ರಾಯಚೂರಿನಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ಭರ್ತಿ

Hosashake News by Hosashake News
August 8, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ, ಸುದ್ದಿ
0
ಅಗ್ನಿವೀರ್ ಸೇನಾ ಭರ್ತಿ: ಮೊದಲ‌ ದಿನ ಕೊಪ್ಪಳ ಜಿಲ್ಲೆಯ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆ
Share on FacebookShare on Twitter

ಹೊಸಶಕೆ ನ್ಯೂಸ್-ರಾಯಚೂರು :  ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್ 8ರಂದು ಅಗ್ನಿವೀರ್ ಸೇನಾ ನೇಮಕಾತಿ ಭರ್ತಿ ಕಾರ್ಯಕ್ರಮ ಮೊದಲ ದಿನ ಯಶಸ್ವಿಯಾಗಿ ನಡೆದಿದ್ದು, ಈ ಸೇನಾ ನೇಮಕಾತಿಗೆ, ದೇಶಸೇವೆ ಬಯಸಿದ ಅನೇಕ ವಿವಿಧ ಜಿಲ್ಲೆಗಳ ಯುವಕರು ಉತ್ಸಾಹದಿಂದ ಭಾಗಿಯಾಗಲಿದ್ದು, ಮೊದಲ ದಿನ ಕೊಪ್ಪಳ ಜಿಲ್ಲೆಯಿಂದ ಒಟ್ಟು 587 ಅಭ್ಯರ್ಥಿಗಳು ವರದಿ ಮಾಡಿಕೊಂಡು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು.

ಶಾರೀರಿಕ ಪರೀಕ್ಷೆ, ಓಟ, ದೈಹಿಕ ಸಾಮರ್ಥ್ಯ ಪರೀಕ್ಷೆ ಸೇರಿದಂತೆ  ಕಠಿಣ ಪರೀಕ್ಷಾ ಹಂತಗಳನ್ನು ಯಶಸ್ವಿಯಾಗಿ ಪೂರೈಸಿ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆಯಾದ್ದು, ಈ ಸೇನಾ ಭರ್ತಿ ಪ್ರಕ್ರಿಯೆಯನ್ನು ಮೊದಲನೇ ದಿನ ಸೇನಾ ನೇಮಕಾತಿ ಮಂಡಳಿ ಅಧಿಕಾರಿಗಳು ಶಿಸ್ತುಬದ್ಧವಾಗಿ ಮುನ್ನಡೆಸಿದರು.  ಅಗ್ನಿವೀರ್ ಸೇನೆಗಾಗಿ ಮುಂದಿನ ಹಂತಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದ್ದು, ಅವರು ಶೀಘ್ರದಲ್ಲೇ ತರಬೇತಿಗೆ ಹಾಜರಾಗಲಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದರು. ದೇಶಸೇವೆಯ ಕನಸು ಹೊತ್ತು ಅದನ್ನು ಸಾಕಾರಗೊಳಿಸಲು ಸೇನಾ ಭರ್ತಿಗೆ ಆಗಮಿಸಿ, ಶಾರಿರೀಕ ಪರೀಕ್ಷಾ ಹಂತದಲ್ಲಿ ಯಶಸ್ವಿಯಾಗಿ ಮುಂದಿನ ಹಂತಕ್ಕೆ ಕಾಲಿಟ್ಟ ಯುವಕರ ಮೊಗದಲ್ಲಿ ಸಂತಷ ಮತ್ತು ದೇಸೆ ಸೇವೆಗೆ ತಾನು ಆಯ್ಕೆಯಾಗುತ್ತೇನೆ ಎನ್ನುವ ಹೆಮ್ಮೆಯ, ವಿಶ್ವಾಸದ ಭಾವ ಕಾಣಿಸಿತು. ತಮ್ಮ ತಮ್ಮ ಕುಟುಂಬದ ಯುವಕರ ಸೇನಾ ಭರ್ತಿ ನೋಡಲು ಮತ್ತು ಅವರಿಗೆ ಸಹಾಯ ಮಾಡಲು ಕುಟುಂಬದವರು ಆಗಮಿಸಿದ್ದರು. ಶಾರೀರಿಕ ಪರೀಕ್ಷೆಯ ಹಂತದಲ್ಲಿ ಯುವಕರು ಪಾಸಾಗಿದ್ದನ್ನು ಕಂಡು ಕೆಲವರು ಭಾವುಕರಾದರು. ಯುವಕರಿಗೆ ಅಭಿನಂದನೆ ತಿಳಿಸಿದರು.

==ಸೇನಾ ಭರ್ತಿ: ಆಗಸ್ಟ್ 9ರಂದು ಕೊಪ್ಪಳ, ಯಾದಗಿರಿ, ಕಲಬುರಗಿ, ಬೀದರನಿಂದ 860 ಅಭ್ಯರ್ಥಿಗಳು ಭಾಗಿ: ನಗರದ ಕೃಷಿ ವಿವಿ ಆವರಣದಲ್ಲಿ ಆರಂಭಗೊಂಡ ಅಗ್ನಿವೀರ್ ಸೇನಾ ಭರ್ತಿಯಲ್ಲಿ ಆಗಸ್ಟ್ 9ರಂದು ಕೊಪ್ಪಳ ಜಿಲ್ಲೆಯಿಂದ 83 ಅಭ್ಯರ್ಥಿಗಳು, ಯಾದಗಿರಿ ಜಿಲ್ಲೆಯಿಂದ 251 ಅಭ್ಯರ್ಥಿಗಳು, ಕಲಬುರಗಿ ಜಿಲ್ಲೆಯಿಂದ 445 ಮತ್ತು ಬೀದರ್‌ ಜಿಲ್ಲೆಯಿಂದ 81 ಅಭ್ಯರ್ಥಿಗಳು ಸೇರಿ ಒಟ್ಟು 860 ಅಭ್ಯರ್ಥಿಗಳು ಭಾಗವಹಿಸುತ್ತಿದ್ದಾರೆ.==

Tags: Agniveer Sena Recruitment: 518 youth from KoppalAgniveer Sena Recruitment: 518 youth from Koppal district selected for next phase on first dayಅಗ್ನಿವೀರ್ ಸೇನಾ ಭರ್ತಿ: ಮೊದಲ‌ ದಿನ ಕೊಪ್ಪಳ ಜಿಲ್ಲೆಯ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆ Raichur News
Previous Post

ಹೊಸಶಕೆ‌ ದಿನಪತ್ರಿಕೆ

Next Post

ಕೊಪ್ಪಳ : ಕೊಲೆಯಾದ ಗವಿಸಿದ್ಧಪ್ಪನ ಮನೆಗೆ ಮುಸ್ಲಿಂ ಸಮಾಜದ ಮುಖಂಡರ ಭೇಟಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ ನೂತನ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್

ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ  ನಡೆದಿದೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ರ್ಯಾಲಿ

ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಜೆಡಿಎಸ್ ನಾಯಕ ಸಿ ವಿ ಚಂದ್ರಶೇಖರ್ ಭೇಟಿ

ಕೊಪ್ಪಳ : ಕೊಲೆಯಾದ ಗವಿಸಿದ್ಧಪ್ಪನ ಮನೆಗೆ ಮುಸ್ಲಿಂ ಸಮಾಜದ ಮುಖಂಡರ ಭೇಟಿ

ಅಗ್ನಿವೀರ್ ಸೇನಾ ಭರ್ತಿ: ಮೊದಲ‌ ದಿನ ಕೊಪ್ಪಳ ಜಿಲ್ಲೆಯ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆ

ಹೊಸಶಕೆ‌ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!