Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕೋಳಿ ಶೀತ ಜ್ವರ ಹರಡದಂತೆ ಸೂಕ್ತ ಮುಂಜಾಗೃತೆ : ಜಿಲ್ಲಾಧಿಕಾರಿ ನಲಿನ್ ಅತುಲ್

Hosashake News by Hosashake News
March 2, 2025
in ಜಿಲ್ಲೆ, ಪ್ರಾದೇಶಿಕ
0
ಕೋಳಿ ಶೀತ ಜ್ವರ ಹರಡದಂತೆ ಸೂಕ್ತ ಮುಂಜಾಗೃತೆ : ಜಿಲ್ಲಾಧಿಕಾರಿ ನಲಿನ್ ಅತುಲ್
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ:

ತೆಲಂಗಾಣ ಮತ್ತು ಆಂದ್ರಪ್ರದೇಶ ಹಾಗೂ ನಮ್ಮ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಳಿ ಶೀತ ಜ್ವರದ ರೋಗೋದ್ರೇಕವು ದೃಢಪಟ್ಟಿದ್ದು, ಈ ರೋಗವು ಹರಡದಂತೆ ಕೊಪ್ಪಳ ಜಿಲ್ಲೆಯಲ್ಲಿ ಸೂಕ್ತ ಮುಂಜಾಗೃತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಶನಿವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿಯ ಕೆಸ್ವಾನ್-2ರ ಸಭಾಂಗಣದಲ್ಲಿ ಜಿಲ್ಲಾ ಪ್ರಾಣಿಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕಳೆದ ವಾರ ಪಕ್ಕದ ರಾಜ್ಯಗಳಾದ ತೆಲಂಗಾಣ ಮತ್ತು ಆಂಧ್ರ ಪ್ರದೇಶಗಳಲ್ಲಿ ಹಾಗೂ ಕರ್ನಾಟಕ ರಾಜ್ಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕುಕ್ಕುಟಗಳಲ್ಲಿ ಕೋಳಿ ಶೀತ ಜ್ವರ(H5N1)ದ ರೋಗೋದ್ರೇಕ ಕಂಡುಬಂದಿದ್ದು, ಸೋಂಕು ದೃಢಪಟ್ಟಿದೆ. ಆದ್ದರಿಂದ ಕೊಪ್ಪಳ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ವಾಣಿಜ್ಯ ಕುಕ್ಕಟ ಕ್ಷೇತ್ರಗಳಿರುವುದರಿಂದ ಮುಂಜಾಗೃತೆ ಕ್ರಮಗಳ ಜತೆಗೆ ರೋಗ ಹರಡುವಿಕೆ, ರೋಗ ಲಕ್ಷಣಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿ ಎಂದು ಅಧಿಕಾರಿಗಳಿಗೆ ಮತ್ತು ಕೊಪ್ಪಳ ಜಿಲ್ಲೆಯ ಕೋಳಿ ಫಾರಂಗಳ ಮಾಲೀಕರಿಗೆ ಸೂಚಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಗಳು ಅಸಹಜ ಸಾವನ್ನಪ್ಪಿದರೆ, ತಕ್ಷಣವೇ ಹತ್ತಿರದ ಪಶುವೈದ್ಯರು ಅಥವಾ ಪಶು ಇಲಾಖೆ ಸಿಬ್ಬಂದಿಯವರ ಗಮನಕ್ಕೆ ತರಬೇಕು. ರೋಗ ನಿಯಂತ್ರಣ ಹಾಗೂ ಆರೋಗ್ಯ ರಕ್ಷಣೆಯ ಹಿತದೃಷ್ಠಿಯಿಂದ ಕೋಳಿ ಫಾರಂಗಳಿಗೆ ಅನುಮತಿಯಿಲ್ಲದೇ ಯಾರು ಪ್ರವೇಶಿಸದಂತೆ ನೋಡಿಕೊಳ್ಳಬೇಕು. ಕೆರೆ, ಕಟ್ಟೆ, ನೀರಿನ ತೋರೆ, ನದಿ ಮತ್ತು ಇತರೇ ನೀರಿನ ಜಾಗಕ್ಕೆ ವಲಸೆ ಬರುವ ಅಥವಾ ಅಲ್ಲಿಯೇ ವಾಸಿಸುವ ಹಕ್ಕಿ ಪಕ್ಷಿಗಳು ಅಸಹಜವಾಗಿ ಸತ್ತರೆ ತಕ್ಷಣವೇ ಪಶುವೈದ್ಯಕೀಯ ಇಲಾಖೆಯ ಗಮನಕ್ಕೆ ತರಬೇಕು ಎಂದರು.
==

ಜಿಲ್ಲೆಯಿಂದ ಹೊರಗೆ ಹಾಗೂ ಹೊರಗಿನಿಂದ ಜಿಲ್ಲೆಗೆ ಪ್ರವೇಶಿಸುವ ಸೋಂಕಿತ ಕೋಳಿ, ಕೋಳಿ ಉತ್ಪನ್ನಗಳು, ಕೋಳಿ ಆಹಾರ, ಸಂಬಂಧಿತ ಪರಿಕರಗಳು ಹಾಗೂ ಸಾಗಾಣಿಕೆ ವಾಹನಗಳನ್ನು ಸೋಂಕು ನಿವಾರಿಕಗಳಿಂದ ಸಿಂಪಡಿಸಿದ ನಂತರವೇ ಚಲನ–ವಲನಕ್ಕೆ ಕ್ರಮವಹಿಸಬೇಕು. ಕೋಳಿ ಫಾರಂಗಳ ಪ್ರದೇಶವನ್ನು ಶುಚಿಯಾಗಿಟ್ಟು ಕೊಳ್ಳುವುದು ಹಾಗೂ ನಿಯಮಿತವಾಗಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಬೇಕು. ವಲಸೆ ಬರುವ ಅಥವಾ ಅಲ್ಲಿಯೇ ವಾಸಿಸುವ ಹಕ್ಕಿ ಪಕ್ಷಿಗಳು ಮನುಷ್ಯರ ಆಹಾರ, ಕುಡಿಯುವ ನೀರಿನ ಸಂಪರ್ಕಕ್ಕೆ ಬರದಂತೆ ಕ್ರಮವಹಿಸಬೇಕು : ರಾಹುಲ್ ರತ್ನಂ ಪಾಂಡೇಯ, ಸಿಇಒ, ಜಿ.ಪಂ.==

ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ ಪಿ.ಎಂ.ಮಲ್ಲಯ್ಯ ಅವರು ಮಾತನಾಡಿ, “ಕೋಳಿ ಶೀತ ಜ್ವರ/ಹಕ್ಕಿಜ್ವರ”ವು ಸಾಂಕ್ರಾಮಿಕ ರೋಗವಾಗಿದ್ದು, “ಎವಿಯನ್ ಇನ್-ಫ್ಲೂ-ಎಂಜಾ ಎಂಬ ವೈರಾಣುವಿನಿಂದ ಬರುವ ರೋಗವಾಗಿದೆ. ಕೋಳಿ ಶೀತ ಜ್ವರವು ಕೋಳಿಯ ವಿವಿಧ ಪ್ರಬೇದಗಳಲ್ಲಿ ಕಂಡುಬರುತ್ತದೆ ಎಂದರು.

ಸಾರ್ವಜನಿಕರು “ಕೋಳಿ ಶೀತ ಜ್ವರ/ ಹಕ್ಕಿಜ್ವರ”ದ ಬಗ್ಗೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಕೋಳಿ ಅಥವಾ ಪಕ್ಷಿಗಳಲ್ಲಿ ಹಠಾತ್ ಸಾವು, ಅಸಾದರಣ ಸಾವು, ಮೂಗೂ, ಬಾಯಿ ಮತ್ತು ಕಣ್ಣಿನಿಂದ ನೀರು ಸುರಿಯುವುದು, ಕೋಳಿಗಳ ಮೋಣಕಾಲು ಮತ್ತು ಪಾದಗಳು ನೀಲಿ ಬಣ್ಣಕ್ಕೆ ತಿರುಗುವುದು. ಈ ರೋಗದ ಲಕ್ಷಣಗಳಾಗಿವೆ. ಸರಿಯಾಗಿ ಬೇಯಿಸದ ಕೋಳಿ ಮಾಂಸ ಮತ್ತು ಮೊಟ್ಟೆಗಳ ಸೇವನೆಯಿಂದ, ಸೂಕ್ತ ಆರೋಗ್ಯ ರಕ್ಷಕ ಕವಚಗಳನ್ನು ಧರಿಸದೇ ರೋಗ ಪಿಡಿತ ಕೋಳಿ ಮತ್ತು ಕುಲುಷಿತ ಸಲಕರಣೆಗಳ ಸಂಪರ್ಕದಿಂದ ರೋಗ ಹರಡುವ ಸಾಧ್ಯತೆ ಇರುತ್ತದೆ

Previous Post

ಹೊಸಬಂಡಿ ಹರ್ಲಾಪೂರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Next Post

ಮಾ.20 ಮತ್ತು 21ಕ್ಕೆ ಐತಿಹಾಸಿಕ ಕನಕಗಿರಿ ಉತ್ಸವ ಆಚರಣೆ 

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!