ಹೊಸಶಕೆ ನ್ಯೂಸ್-ಗಂಗಾವತಿ: ಗಂಗಾವತಿ ಗ್ರಾಮೀಣ ಭಾಗದ ಸಿಪಿಐ ಆಗಿ ರಂಗಪ್ಪ ದೊಡ್ಡಮನಿ ಅವರು ಅಧಿಕಾರ ಸ್ವೀಕರಿಸಿದ್ದು, ಗ್ರಾಮೀಣ ಭಾಗದಲ್ಲಿ ಆಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಮತ್ತು ಶಾಂತಿ ಸೌಹಾರ್ದತೆಗಾಗಿ ಎಲ್ಲರ ಸಹಕಾರದ ಜೊತೆಗೆ ಇಲಾಖೆಯ ನಿಯಮಗಳನ್ನು ಅನುಷ್ಠಾನ ಮಾಡಲಾಗುತ್ತದೆ ಎಂದರು.
ಪೊಲೀಸ್ ಇಲಾಖೆಯ ಮತ್ತು ಶೋಷಿತ ಜನರಿಗೆ ಕಾನೂನಾತ್ಮಕ ವಾಗಿ ನ್ಯಾಯ ಒದಗಿಸುವಂತಹ ಪ್ರಾಮಾಣಿಕ ಕಾರ್ಯ ಮಾಡುತ್ತೇನೆ. ಮೇಲಾಧಿಕಾರಿಗಳ ಆದೇಶದಂತೆ ಅಕ್ರಮ ಚಟುವಟಿಕೆಗಳನ್ನು ತಡೆದು ಪ್ರತಿಯೊಬ್ಬರು ಶಾಂತಿ ಕಾನೂನು ಸುವ್ಯವಸ್ಥೆ ಅಡಿಯಲ್ಲಿ ಜೀವನ ನಡೆಸುವ ವಾತಾವರಣ ನಿರ್ಮಿಸಲಾಗುತ್ತದೆ ಎಂದರು.
ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸೋಮಶೇಖರ್ ಜುಟ್ಟಲ್ ಅವರು ಪ್ರೋಮೋಷನ್ ಡಿವೈಎಸ್ಪಿಯಾಗಿ ಹುಬ್ಬಳ್ಳಿಗೆ ವರ್ಗಾವಣೆ ಮಾಡಿ ಆದೇಶಿಸಿತ್ತು. ನಂತರ ಅವರ ಸ್ಥಾನಕ್ಕೆ ನೂತನ ಸಿಪಿಐ ಆಗಿ ರಂಗಪ್ಪ ದೊಡ್ಡಮನಿ ಬಂದಿದ್ದಾರೆ. ಅವರು ಈ ಹಿಂದೆ ರಾಯಚೂರು ಜಿಲ್ಲೆ ಮುದಗಲ್ ಮಾನವಿ ,ಬಳ್ಳಾರಿ ಜಿಲ್ಲೆ ತಕಲಕೋಟಿ, ಕೊಪ್ಪಳ ಜಿಲ್ಲೆ ಕನಕಗಿರಿ ಬೇರೆ ಬೇರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಹಾಗೂ ಗುಪ್ತವಾರ್ತೆ ಬೆಂಗಳೂರು ಸಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಗಂಗಾವತಿ ಗ್ರಾಮೀಣ ಸಿಪಿಐಯಾಗಿ ನೇಮಕಗೊಂಡಿದ್ದು. ಗ್ರಾಮೀಣ ಭಾಗದಲ್ಲಿ ಅಕ್ರಮ ದಂಧಗೆ ಇವರಿಂದಲೇ ಕಡಿವಾಣ ಬಿಳಲಿ ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.