Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಬಿಎಸ್ ಪಿಎಲ್ ಕಾರ್ಖಾನೆ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ

Hosashake News by Hosashake News
April 12, 2025
in ಜಿಲ್ಲೆ, ಪ್ರಾದೇಶಿಕ, ರಾಜಕೀಯ, ರಾಜ್ಯ
0
ಬಿಎಸ್ ಪಿಎಲ್ ಕಾರ್ಖಾನೆ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ
Share on FacebookShare on Twitter

 

ಕೊಪ್ಪಳ
ಕೊಪ್ಪಳ ಬಳಿ ಬಿಎಸ್ ಪಿಎಲ್ ಕಾರ್ಖಾನೆ ವಿರುದ್ಧ ಹೋರಾಟವನ್ನು ತೀವ್ರಗೊಳಿಸುವ ಅಗತ್ಯವಿದೆ ಎಂದು ಕೊಪ್ಪಳ ಬಚಾವೋ ಆಂದೋಲನ ಸಮಿತಿ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು ಅವರು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ತುರ್ತು ಸಭೆ ನಡೆಸಿದ ವೇಳೆಯಲ್ಲಿ  ಮಾತನಾಡಿದ ಅವರು, ಬಿಎಸ್ ಪಿಎಲ್ ಕಾರ್ಖಾನೆಗೆ ಈಗ ಕೇಂದ್ರ ಸರ್ಕಾರದ ಪರಿಸರ ಇಲಾಖೆಯ ಅನತಿ ನೀಡಿದ್ದನ್ನು ಕಂಪನಿಯ ಪ್ರತಿನಿಧಿಗಳೇ ಹೇಳಿಕೊಂಡಿರುವುದು ಮಾಧ್ಯಮದಲ್ಲಿ ವರದಿಯಾಗಿದೆ.

ರಟಜ್ಯ ಸರ್ಕಾರ , ಕೇಂದ್ರ ಸರ್ಕಾರವೂ ಸಹ ಉದಾರೀಕರಣ ನೆಪದಲ್ಲಿ ಕಾರ್ಪೋರೆಟ್ ಪರವಾಗಿಯೇ ಇದ್ದಾರೆ ಎನ್ನುವುದು ಗೊತ್ತಾಗುತ್ತದೆ. ಹೀಗಾಗಿಯೇ ನಾವೆಲ್ಲ ಒಗ್ಗಟ್ಟಾಗಿ ಹೋರಾಟವನ್ನು ತೀರ್ವ ಮಾಡುವ ಅಗತ್ಯವೆಂದು ಹೇಳಿದರು.

ಹೋರಾಟಗಾರ ಡಿಎಚ್ ಪೂಜಾರ ಅವರು ಮಾತನಾಡಿ, ಕೊಪ್ಪಳ ಬಳಿ ಬಿಎಸ್ ಪಿಎಲ್ ಕಾರ್ಖಾನೆ ಅವರು ಈಗಾಗಲೇ ತಾವು ಕಾರ್ಖಾನೆ ಸ್ಥಾಪಿಸುವ ದಿಸೆಯಲ್ಲಿ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ನಾವು ಈ ಹೋರಾಟವನ್ನು ಮತ್ತಷ್ಟು ತೀರ್ವಗೊಳಿಸುವ ಅಗತ್ಯವಿದೆ. ಇದಕ್ಕಾಗಿ ಜನಾಂದೋಲನ ರೂಪಿಸಬೇಕು ಎಂದರು.

ಹಿರಿಯ ಮುಖಂಡರಾದ ಮಹಾಂತೇಶ ಕೊತ್ಬಾಳ ಅವರು ಮಾತನಾಡಿ. ಜನಪ್ರತಿನಿಧಿಗಳು ಏನಾದರೂ ಮಾಡಲಿ.‌ಆದರೆ ನಾವು ಹೋರಾಟವನ್ನು ಜಂಟಿಯಾಗಿ ಮುಂದುವರೆಸೋಣ. ಈ ದಿಸೆಯಲ್ಲಿ ಶ್ತೀ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಮತ್ತೆ ಅಹ್ವಾನ ಮಾಡೋಣ ಎಂದರು.

ಕೊಪ್ಪಳ ತಾಲೂಕು ಪರಿಸರ ಹಿತರಕ್ಷಣಾ ಹೋರಾಟ ಸಮಿತಿ ಸಂಚಾಲಕ ಶರಣಪ್ಪ ಸಜ್ಜನ ಅವರು ಮಾತನಾಡಿ. ಈ ವಿಷಯದಲ್ಲಿ ನಾವು ಸುಮ್ಮನೇ ಕುಳಿತಿಲ್ಲ. ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಜಿಗಳು ಅಂದು ಮಾತನಾಡಿ, ಜನಪ್ರತಿನಿಧಿಗಳಿಗೆ ಜವಬ್ದಾರಿ ನೀಡಿದ್ದಾರೆ. ಈ ದಿಸೆಯಲ್ಲಿ ಹಿಟ್ನಾಳ ಕುಟುಂಬ ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಪ್ರಯತ್ನ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯಯರವರನ್ನು ಭೇಟಿ ಮಾಡಿದಾಗ ಈ ಕುರಿತು ಸರಕಾರದ ಅಧೀನ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ವರದಿ ತರಿಸಿಕೊಳ್ಳುವಂತೆ ಆದೇಶಿಸಿದ್ದರು ಆದರೆ ಅದು ಏನಾಯಿತೋ ಗೊತ್ತಿಲ್ಲ ಅದರ ಬಗ್ಗೆ ವಿಚಾರಿಸಬೇಕು ಎಂದರು.

ಸಭೆಯಲ್ಲಿ ಸ್ಥಳೀಯವಾಗಿ ಧರಣಿ ಮಾಡುವುದರ ಜೊತೆಗೆ ಸಿಎಂ ಮತ್ತು ಸಚಿವರನ್ನು ಭೇಟಿಯಾಗಿ ಕಾರ್ಖಾನೆ ಸ್ಥಾಪನೆ ರದ್ದು ಆದೇಶಕ್ಕೆ ಒತ್ತಾಯಿಸೋಣ ಎಂಬ ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು.

ಸಭೆಯಲ್ಲಿ  ಎ.ವಿ.ಕಣವಿ,  ಕೆ.ಬಿ.ಗೋನಾಳ, ಸೋಮರಡ್ಡಿ ಅಳವಂಡಿ, ರಮೇಶ ತುಪ್ಪದ, ಶಿವಕುಮಾರ ಕುಕನೂರ, ಶರಣು ಪಾಟೀಲ  ಇತರರು ಪಾಲ್ಗೊಂಡಿದ್ದರು.

Tags: Decision to intensify fight against BSPL factoryKoppal MSPL&BSPLಬಿಎಸ್ಪಿಎಲ್ ಕಾರ್ಖಾನೆ ವಿರುದ್ದ ಹೋರಾಟ
Previous Post

ಓಜನಹಳ್ಳಿ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಸಾಮೂಹಿಕ ವಿವಾಹ ಕಾರ್ಯಕ್ರಮ

Next Post

ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ನಡೆದ ಕದಂಬೋತ್ಸವ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!