Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಹಾಲುಮತ ಮಹಾಸಭಾದಿಂದ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

*ಹೆಚ್ಚು ಅಂಕ ಪಡೆದ ಕುರುಬ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ -ಹನುಮಂತಪ್ಪ ಕೌದಿ

Hosashake News by Hosashake News
May 14, 2025
in ಜಿಲ್ಲೆ, ಪ್ರಾದೇಶಿಕ, ಸಾಮಾಜಿಕ, ಸುದ್ದಿ
0
ಹಾಲುಮತ ಮಹಾಸಭಾದಿಂದ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ : ಕೊಪ್ಪಳ ತಾಲೂಕಿನ ಕುರುಬ ಸಮಾಜದ ಪ್ರತಿಭಾನ್ವಿತ 2024-25 ನೇ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 90% ಕ್ಕಿಂತ ಹೆಚ್ಚು ಅಂಕ ಪಡೆದ ಮತ್ತು ದ್ವಿತೀಯ ವರ್ಷದ ಪಿಯುಸಿ ಯ ಯಾವುದೇ ವಿಭಾಗದಲ್ಲಿ ಶೇಕಡಾ 85%ಕ್ಕಿಂತ ಹೆಚ್ಚು ಅಂಕ ಪಡೆದ ಕೊಪ್ಪಳ ತಾಲೂಕಿನ ಕುರುಬ ಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ ಅವರು, ಹಾಲುಮತ ಮಹಾಸಭಾದಿಂದ ತಾಲೂಕಿನ ಕುರುಬ ಸಮಾಜದ ಪ್ರತಿಭಾನ್ವಿತ 2024-25ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಆಸಕ್ತ ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಅಥವಾ ವರ್ಗಾವಣೆ ಪ್ರಮಾಣ ಪತ್ರ, ಎರಡು ಪಾಸ್ ಪೋರ್ಟ್ ಫೋಟೋ ದೊಂದಿಗೆ ಶ್ರೀಲಕ್ಷ್ಮೀನಾರಾಯಣ ಜೆರಾಕ್ಸ್ ಸೆಂಟರ್-9611981946, ತಿಕೋಟಿಕರ್ ಪೆಟ್ರೋಲ್ ಬಂಕ್ ಹಿಂದುಗಡೆ ಸಿಂಡಿಕೇಟ್ ಬ್ಯಾಂಕ್ – ಗಂಗಾ ಯಮುನಾ ಬ್ಯಾಂಕ್ ಹತ್ತಿರ ಕೊಪ್ಪಳ, ಶ್ರೀ ಬೀರಲಿಂಗೇಶ್ವರ ನೆಟ್ ಸೆಂಟರ್ 8431343458  ಗವಿಮಠ ಕಾಂಪ್ಲೆಕ್ಸ್ (ಗವಿಮಠ ಕೆರೆ) ಕೊಪ್ಪಳ ಇಲ್ಲಿಗೆ ಮೇ 26ರ ಒಳಗೆ ಅರ್ಜಿ ಸಲ್ಲಿಸಲು ಹೇಳಿದರು.

ಹೆಚ್ಚಿನ ಮಾಹಿತಿಗಾಗಿ ಹಾಲುಮತ ಮಹಾಸಭಾದ ತಾಲೂಕ ಗೌರವಾಧ್ಯಕ್ಷ ದ್ಯಾಮನಗೌಡ ಭೀಮನೂರು 9901741295, ತಾಲೂಕು ಪ್ರಧಾನ ಕಾರ್ಯದರ್ಶಿ ಗವಿಸಿದ್ದಪ್ಪ ಗೊರವರ್ 9035512375,  ಅನ್ನದಾನಿಸ್ವಾಮಿ ಚಿಕ್ಕಸಿಂದೊಗಿ 7022176178, ನಗರ ಘಟಕದ ಗೌರವಾಧ್ಯಕ್ಷರು ದ್ಯಾಮಣ್ಣ ಡೊಳ್ಳಿನ್ 8073711463, ಇವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಸುದ್ದಿಗೋಷ್ಠಿಯಲ್ಲಿ ಹಾಲುಮತ ಮಹಾಸಭಾದ ಮುಖಂಡರಾದ ಕುಬೇರ್ ಮಜ್ಜಿಗಿ, ದ್ಯಾಮಣ್ಣ ಕರಿಗಾರ್, ಮುದ್ದಪ್ಪ ಗೊಂದಿ ಹೊಸಳ್ಳಿ, ಪರಶುರಾಮ್ ಅಣ್ಣಿಗೇರಿ, ಮಲ್ಲೇಶ್ ಹದ್ದೀನ್ ಇತರರು ಇದ್ದರು.

Tags: Hanumatappa koudiHosashake Daily Koppal NewsKoppal Applications invited from students from the Kuruba community who have scored high marks - Hanumanthappa KaudiKoppal Kuber majjagiTalent award given to students from the Kuruba community by Halumata Mahasabhaಹಾಲುಮತ ಮಹಾಸಭಾದಿಂದ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಹೆಚ್ಚು ಅಂಕ ಪಡೆದ ಕುರುಬ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ -ಹನುಮಂತಪ್ಪ ಕೌದಿ
Previous Post

ರಾಜ್ಯದ ಸಂಸದರು ಕೇಂದ್ರದ ಅನುದಾನ ತರಲು ಪ್ರಯತ್ನಿಸಲಿ- ಸಿದ್ದರಾಮಯ್ಯ

Next Post

ನಕ್ಸಲ್ ನಿಗ್ರಹ ದಳ ಮಾದರಿಯಲ್ಲಿ ಆ್ಯಂಟಿ ಕಮ್ಯೂನಲ್ ಪೋರ್ಸ್ : ಗೃಹ ಸಚಿವ ಡಾ. ಜಿ. ಪರಮೇಶ್ವರ್

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಬಹದ್ದೂರಬಂಡಿ ಶಾಲೆಯಲ್ಲಿ ಹೂ, ಸಿಹಿ ನೀಡಿ ಡೊಳ್ಳು ಬಾರಿಸಿ, ಆರತಿಯೊಂದಿಗೆ ಮಕ್ಕಳಿಗೆ ಸ್ವಾಗತ

ಹೊಸಶಕೆ ದಿನಪತ್ರಿಕೆ

ತುಂಗಭದ್ರಾ ಜಲಾಶಯದ ಎಲ್ಲಾ ಗೇಟ್ ಗಳ ಜೋಡಣೆಗೆ ರೂ.52 ಕೋಟಿ ಮೊತ್ತದ ಟೆಂಡರ್ – ರಾಜಶೇಖರ್ ಹಿಟ್ನಾಳ

ಹೊಸಶಕೆ ದಿನಪತ್ರಿಕೆ

ಗಂಗಾವತಿಯಲ್ಲಿ ಅಕ್ರಮವಾಗಿ ಹೈಡ್ರೋ ಗಾಂಜಾ ಮಾದಕ ವಸ್ತು ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!