Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕಾರ್ಮಿಕರ ಶ್ರಮವನ್ನು ಗೌರವಿಸಬೇಕು – ನ್ಯಾ. ರಂಗನಾಥಸ್ವಾಮಿ ಜೆ.

Hosashake News by Hosashake News
May 8, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ
0
ಕಾರ್ಮಿಕರ ಶ್ರಮವನ್ನು ಗೌರವಿಸಬೇಕು – ನ್ಯಾ. ರಂಗನಾಥಸ್ವಾಮಿ ಜೆ.
Share on FacebookShare on Twitter

ತಳಕಲ್‌ ನಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ

ಹೊಸಶಕೆ ನ್ಯೂಸ್-ಕೊಪ್ಪಳ: ಕಾರ್ಮಿಕರು ದೇಶದ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡುತ್ತಾರೆ. ಅವರ ಶ್ರಮವನ್ನು ನಾವೆಲ್ಲರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಯಲಬುರ್ಗಾ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ರಂಗನಾಥಸ್ವಾಮಿ ಜೆ. ಹೇಳಿದರು.

ತಳಕಲ್‌ನ ಅಬ್ದುಲ್ ನಜೀರಸಾಬ ಸಮುದಾಯ ಭವನದಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ  ಅವರು.ಅಂತರಾಷ್ಟ್ರೀಯ ಕಾರ್ಮಿಕ ದಿನವು ಕಾರ್ಮಿಕ ಹೋರಾಟದ ನೆನಪಿಗಾಗಿ ಆಚರಿಸುತ್ತೇವೆ. ಕಾರ್ಮಿಕರ ಮೇಲೆ ಇದ್ದ ದೌರ್ಜನ್ಯ ಮತ್ತು ಹೆಚ್ಚು ಕೆಲಸದ ಸಮಯ ಹಾಗೂ ಕಿರುಕುಳ ಇಂತಹ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಲು ಕಮ್ಯೂನಿಸ್ಟ್ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಕ್ರಾಂತಿ ಸ್ವರೂಪದ ಹೋರಾಟ ನಡೆಸಿದರು. ಆಗ ಅದೊಂದು ಕ್ರಾಂತಿಯೇ ಆಯಿತು. ನಂತರದಲ್ಲಿ ಆ ಹೋರಾಟದ ನೆನಪಿಗಾಗಿ ಮೇ 1  ಅಂತರಾಷ್ಟ್ರೀಯ ಕಾರ್ಮಿಕ ದಿನವಾಗಿ 1886 ರಿಂದ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಬಾಲಕಾರ್ಮಿಕ ಕಾಯ್ದೆ ಕುರಿತು ಮಾಹಿತಿ ನೀಡಿ, ಮಕ್ಕಳನ್ನು ಯಾರೂ ಕೂಡಾ ಕೆಲಸಕ್ಕೆ ಬಳಸಿಕೊಳ್ಳಬಾರದು, ಅವರನ್ನು ಶಿಕ್ಷಣವಂತರನ್ನಾಗಿ ಮಾಡಿ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದು ಹೇಳಿದರು.  ಅಪರ ಸರಕಾರಿ ವಕೀಲರಾದ ಮಲ್ಲನಗೌಡ ಎಸ್. ಪಾಟೀಲ,   ಕುಷ್ಟಗಿ ಕಾರ್ಮಿಕ ನಿರೀಕ್ಷಕರಾದ ನಿವೇದಿತಾ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಎಸ್.ಎಸ್ ಹೊಂಬಳ ಅವರು ಮಾತನಾಡಿ, ಕಾರ್ಮಿಕರಿಗೆ ಇರುವ ಸೌಲಭ್ಯಗಳ ಕುರಿತು ಸಂಘಟನೆಯವರು ಸಂಪೂರ್ಣ ಮಾಹಿತಿ ಪಡೆದು ಕಾರ್ಮಿಕರಿಗೆ ಮಾಹಿತಿ ನೀಡಬೇಕು. ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಳಕಲ್ ಗ್ರಾ.ಪಂ ಅಧ್ಯಕ್ಷರಾದ ಜಹೀರಾ ಬೇಗಂ, ಕಲ್ಯಾಣ ಕರ್ನಾಟಕ ಒಕ್ಕೂಟ ಸಂಘದ  ಜಿಲ್ಲಾ ಅಧ್ಯಕ್ಷರಾದ ರಮೇಶ ಘೋರ್ಪಡೆ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ, ಕ.ಕಾ ಮಂಡಳಿಯ ಎಕ್ಸಿಕ್ಯೂಟಿವ್ ಹೇಮಂತ್ ಸಿಂಗ್, ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದಶಿ ಮಹಾಂತೇಶ ಈ.ಟಿ. ಸೇರಿದಂತೆ ಉಡಚಮ್ಮದೇವಿ ಕಟ್ಟಡ ಕಾರ್ಮಿಕ ಪದಾಧಿಕಾರಿಗಳು, ಕಾರ್ಮಿಕ ಇಲಾಖೆ ಸಿಬ್ಬಂದಿಗಳು ಹಾಗೂ ತಳಕಲ್ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

Tags: International Labour Day program in TalakalKoppal newsTalakal Koppal KarnatakaThe hard work of workers should be respected - Justice Ranganathaswamy J.ಕಾರ್ಮಿಕರ ಶ್ರಮವನ್ನು ಗೌರವಿಸಬೇಕು - ನ್ಯಾ. ರಂಗನಾಥಸ್ವಾಮಿ ಜೆ.ತಳಕಲ್ ನಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ
Previous Post

ಸರ್ವಪಕ್ಷ ಸಭೆ : ಆಪರೇಷನ್‌ ಸಿಂದೂರ್‌ ಮುಗಿದಿಲ್ಲ – ಕೇಂದ್ರ ಸರ್ಕಾರ

Next Post

ಮೇ 9, ಶುಕ್ರವಾರ ಕೊಪ್ಪಳ ನಗರದ ವಿವಿಧಡೆ ವಿದ್ಯುತ್ ವ್ಯತ್ಯಯ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!