ಹೊಸಶಕೆ ನ್ಯೂಸ್-ಕೊಪ್ಪಳ: ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಮಲ್ಲಪ್ಪ ಗುಂಡೂರ್ ಅವರಿಗೆ 2024 ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದೆ.
ಪ್ರಸ್ತುತ ಕೊಪ್ಪಳದ ಜಿಲ್ಲಾಧಿಕಾರಿಗಳ ಕಛೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಮಂಜುನಾಥ್ ಅವರು 2015 ನೇ ಸಾಲಿನ KAS ಬ್ಯಾಚ್ ನ ಅಧಿಕಾರಿಗಳಾಗಿರುವ ಇವರು ಕೊಪ್ಪಳ ತಾಲ್ಲೂಕಿನ ಹೊರತಟ್ನಾಳ ಗ್ರಾಮದವರಾಗಿದ್ದಾರೆ, ಈ ಹಿಂದೆ ಇವರು ಸಿಂಧನೂರು ನಗರಸಭೆಯಲ್ಲಿ ಪೌರಾಯುಕ್ತರಾಗಿ ಅನುಪಮ ಸೇವೆ ಸಲ್ಲಿಸಿದ್ದಕ್ಕಾಗಿ 2024ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯಾದರ್ಶಿಗಳ ಅಧ್ಯಕ್ಷತೆಯಲ್ಲಿನ ಸಮಿತಿ ಆಯ್ಕೆ ಗೊಳಿಸಿ, ಪ್ರಶಸ್ತಿಯನ್ನು ಘೋಷಿಸಿದೆ.
ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಮಂಜುನಾಥ್ ಗುಂಡೂರ್ ಅವರಿಗೆ ಜಿಲ್ಲಾಧಿಕಾರಿಗಳಾದ ಸುರೇಶ್ ಇಟ್ನಾಳ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ನೌಕರರ ಸಂಘ, ಜಿಲ್ಲಾ ಡಿಯುಡಿಸಿ, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಅಧಿಕಾರಿ, ನೌಕರರು ಅಭಿನಂದಿಸಿ ಶುಭಾಶಯಗಳನ್ನು ತಿಳಿಸಿದ್ದಾರೆ
