Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ನದಾಫ್- ಪಿಂಜಾರ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಅನುದಾನ ಒದಗಿಸಲಿ

ಜಿಲ್ಲಾ ನದಾಫ್ ಪಿಂಜಾರ ಸಮಾಜದ ಜಿಲ್ಲಾಧ್ಯಕ್ಷ ಕಾಶಿಂಅಲಿ ಮುದ್ದಾಬಳ್ಳಿ ಆಗ್ರಹ

Hosashake News by Hosashake News
March 14, 2025
in ಜಿಲ್ಲೆ, ದೇಶ, ಪ್ರಾದೇಶಿಕ
0
ನದಾಫ್- ಪಿಂಜಾರ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಅನುದಾನ ಒದಗಿಸಲಿ
Share on FacebookShare on Twitter

ಹೊಸಶಕೆ ನ್ಯೂಸ್- ಪಿಂಜಾರ್ ಸಮಾಜಕ್ಕೆ ಸರಕಾರ ಸ್ಪಂದಿದೆ ಅನ್ಯಾಯ ಮಾಡುತ್ತಿದೆ ಎಂದು ಕೊಪ್ಪಳ ಜಿಲ್ಲಾ ನದಾಫ್ ಪಿಂಜಾರ ಸಮಾಜದ ಮುಖಂಡರು ಹೇಳಿದರು.

ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ  ಕಾಶೀಂಅಲಿ ಮುದ್ದಾಬಳ್ಳಿ ಮಾತನಾಡಿ, ರಾಜ್ಯದಲ್ಲಿ ಪಿಂಜಾರ್ ನದಾಫ್ ಸಮಾಜ ಸುಮಾರು 25 ಲಕ್ಷ ಜನಸಂಖ್ಯೆ ಇದ್ದು , ನಮ್ಮ ಸಮಾಜ ಅರೆ ಅಲೆಮಾರಿಗಳಾಗಿದ್ದು, ಆರ್ಥಿಕವಾಗಿ, ಶೈಕ್ಷಣಿಕವಾಗಿ ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ. ಮುಖ್ಯಮಂತ್ರಿಗಳಿಗೆ ಹಾಗೂ ಸಂಬಂಧಪಟ್ಟ ಸಚಿವರುಗಳಿಗೆ ಖುದ್ದಾಗಿ ಭೇಟಿ ಮಾಡಿ ಅನುದಾನ ಒದಗಿಸಲು ಕೋರಿದರು ಬಜೆಟ್ ನಲ್ಲಿ ಪ್ರಸ್ತಾಪವೇ ಮಾಡದೇ ಅನ್ಯಾಯ ಮಾಡಿದೆ ಎಂದು ತಿಳಿಸಿದರು.

ಸರಕಾರ ವೃತ್ತಿ ಆಧಾರದ ಮೇಲೆ ಪ್ರವರ್ಗ-1ರಲ್ಲಿ ಮೀಸಲಾತಿಯನ್ನು ನೀಡಿದ್ದು, ಇತರೆ 117 ಜಾತಿಯರೊಂದಿಗೆ ಸ್ಪರ್ಧೆ ಮಾಡಿ ಶೇ.4ರ ಒಟ್ಟು ಮೀಸಲಾತಿಯಲ್ಲಿ ಸರ್ಕಾರಿ ಹುದ್ದೆಗೆ ಆಯ್ಕೆಯಾಗುವುದು ಕಷ್ಟ ಸಾಧ್ಯವಾಗಿರುತ್ತದೆ, ಕೆಪಿಎಸ್‌ಸಿಯಲ್ಲಿ ಪಿಂಜಾರ ಸಮಾಜದವರು ಆಯ್ಕೆಯಾಗಿರುವುದಿಲ್ಲ, ಸಮಾಜದವರು ಸತತವಾಗಿ ಮನವಿಗಳನ್ನು ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಪಿಂಜಾರ್ ನದಾಫ್ ಸಮಾಜದ ರಾಜ್ಯ ಕೋಶಾಧ್ಯಕ್ಷ ಶಾಬುದ್ದೀನ್ ನೂರಬಾಷಾ, ಜಿಲ್ಲಾ ಗೌರವಾಧ್ಯಕ್ಷ ಹೊನ್ನೂರ್ ಸಾಬ್ ಬೈರಾಪುರ, ಕೊಪ್ಪಳ ತಾಲೂಕು ಅಧ್ಯಕ್ಷ ಆಸ್ಮಾನ್ ಸಾಬ್ ಕರ್ಕಿಹಳ್ಳಿ, ಕೊಪ್ಪಳ ತಾಲೂಕ ಉಪಾಧ್ಯಕ್ಷರಾದ ಫಕ್ರುಸಾಬ್ ನದಾಫ್, ಮುರ್ತುಜಾ ಚುಟ್ಟಾದ್ ಅಸಮಾಧಾನ ವ್ಯಕ್ತಪಡಿಸಿ ನದಾಫ್ ಪಿಂಜಾರ ಸಮಾಜದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಂದಿನ ವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

Tags: District President of the District Nadaf Pinjara SamajGovernment should provide funds for the development of Nadaf-Pinjara communityhas demandedKarnataka Government should provide funds for the development of Nadaf-Pinjara communityKashim Ali MuddaballiKashima Ali muddaballiKoppal KashimaAli MuddaballiNadaf-Pinjara
Previous Post

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Next Post

ತಾಲೂಕಾ 10 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಮಾಲಾ ಬಡಿಗೇರ್ ಆಯ್ಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!