Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಮಹಿಳಾ ಸ್ವಸಹಾಯ ಗುಂಪುಗಳ ಆರ್ಥಿಕ ಬಲವರ್ಧನೆಗೆ ಮತ್ಸ್ಯ ಸಂಜೀವಿನಿ ಯೋಜನೆ ಸಹಕಾರಿ- ಸಿಇಓ ವರ್ಣಿತ್ ನೇಗಿ

Hosashake News by Hosashake News
July 25, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ
0
ಮಹಿಳಾ ಸ್ವಸಹಾಯ ಗುಂಪುಗಳ ಆರ್ಥಿಕ ಬಲವರ್ಧನೆಗೆ ಮತ್ಸ್ಯ ಸಂಜೀವಿನಿ ಯೋಜನೆ ಸಹಕಾರಿ- ಸಿಇಓ ವರ್ಣಿತ್ ನೇಗಿ
Share on FacebookShare on Twitter

ಮತ್ಸ್ಯ ಸಂಜೀವಿನಿ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರ

ಹೊಸಶಕೆ ನ್ಯೂಸ್-ಕೊಪ್ಪಳ : ಮೀನು ಕೃಷಿ ಕೈಗೊಳ್ಳಲು ಮತ್ಸ್ಯ ಸಂಜೀವಿನಿ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಆರ್ಥಿಕ ಬಲವರ್ಧನೆಗಾಗಿ ತುಂಬಾ ಸಹಕಾರಿಯಾಗಲಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಹೇಳಿದರು.

ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜಿ.ಪಂ ಹಾಗೂ ಮೀನುಗಾರಿಕೆ ಇಲಾಖೆಗಳ ಸಹಯೋಗದಲ್ಲಿ ಮತ್ಸ್ಯ ಸಂಜೀವಿನಿ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿರುವ ಕೆರೆಗಳಲ್ಲಿ ಮಳೆಗಾಲದ ನಂತರವೂ 6 ತಿಂಗಳುಗಳ ಕಾಲ ನೀರು ಸಂಗ್ರಹವಾಗಿರುವಂತಹ ಸುಮಾರು 15 ಕೆರೆಗಳನ್ನು ಗುರುತಿಸಿದ್ದು, ಅಂತಹ ಕೆರೆಗಳಲ್ಲಿ  ಮತ್ಸ್ಯ ಸಂಜೀವಿನಿ ಯೋಜನೆಯಡಿ ಮೀನು ಕೃಷಿಯನ್ನು ಕೈಗೊಳ್ಳಲು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಕೆರೆಗಳ ಗುತ್ತಿಗೆ ನೀಡಲು ಅವಕಾಶವಿದ್ದು, ಇದರಿಂದ ಗ್ರಾಮೀಣ ಭಾಗದಲ್ಲಿರುವ ಸ್ವಸಹಾಯ ಸಂಘದ ಗುಂಪಿನ ಸದಸ್ಯರಿಗೆ ಆರ್ಥಿಕವಾಗಿ ಸಬಲೀಕರಣವಾಗಲಿದೆ ಎಂದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ವಿಜಯನಗರ ಜಿಲ್ಲೆಯ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಮಲ್ಲೇಶ ನಾಯಕ ಅವರು ಇಲಾಖೆ ಯೋಜನೆಗಳು ಹಾಗೂ ಸಾಲ ಸೌಲಭ್ಯಗಳ ಕುರಿತು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವಿವರವಾದ ಮಾಹಿತಿ ನೀಡಿದರು.  ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಿ., ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ, ಮೀನಿಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಪಾಟೀಲ್, ಗಂಗಾವತಿ ಆನಂದ ಪಾಟೀಲ್, ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತನ ಓಂಬುಡ್ಸ್ ಮನ್ ವೀರಣ್ಣ ಕಮ್ತಾರ, ಎನ್.ಆರ್.ಎಲ್.ಎಂ ಘಟಕದ ಅಂಬಣ್ಣ ಹಾಗೂ ಮೀನುಗಾರಿಕೆ ಇಲಾಖೆಯ ಇತರೆ ಅಧಿಕಾರಿ, ಸಿಬ್ಬಂದಿಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: economic empowerment of women self-help groups - CEO Varnit NegiKoppal ZP ಮಹಿಳಾ ಸ್ವಸಹಾಯ ಗುಂಪುಗಳ ಆರ್ಥಿಕ ಬಲವರ್ಧನೆಗೆ ಮತ್ಸ್ಯ ಸಂಜೀವಿನಿ ಯೋಜನೆ ಸಹಕಾರಿ- ಸಿಇಓ ವರ್ಣಿತ್ ನೇಗಿMatsya Sanjeevini Yojana is a cooperative project for the economic empowerment of women self-help groups - CEO Varnit NegiOne-day workshop for members of women's self-help groups under the Matsya Sanjeevini schemeಮತ್ಸ್ಯ ಸಂಜೀವಿನಿ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರ
Previous Post

ಕೆಕೆಆರ್‌ಡಿಬಿ 2025- 26 ನೇ ಸಾಲಿನ 5 ಸಾವಿರ ಕೋಟಿ ರೂ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ-ಡಾ.ಅಜಯ್ ಸಿಂಗ್

Next Post

ಹೊಸಶಕೆ ದಿನಪತ್ರಿಕೆ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ ನದಿ

ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ ಎಂದ ಶಿವರಾಜ್  ತಂಗಡಗಿ

ರೈತ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ – ಸಚಿವ ಶಿವರಾಜ ತಂಗಡಗಿ

ವಿಜಯೇಂದ್ರ, ಮೋದಿ ಮನೆಯ ಮುಂದೆ ಪ್ರತಿಭಟನೆ ಮಾಡಲಿ: ಸಚಿವ ತಂಗಡಗಿ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!