ಹೊಸಶಕೆ ನ್ಯೂಸ್-ಯಲಬುರ್ಗಾ: ತಾಲ್ಲೂಕಿನ ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ ಒಣ ಗಾಂಜಾವನ್ನು ಗುರುವಾರ ಅಬಕಾರಿ ಇಲಾಖೆಯ ತಂಡವು ಜಪ್ತಿ ಮಾಡಿ, ಪ್ರಕರಣ ದಾಖಲಿಸಿಕೊಂಡಿದೆ.
ಅಬಕಾರಿ ಉಪ ಅಧೀಕ್ಷಕರಾದ ಭಾರತಿ ಅವರ ನೇತೃತ್ವದಲ್ಲಿ ಕುಷ್ಟಗಿ ವಲಯ ವ್ಯಾಪ್ತಿಯ ಚಿಕ್ಕವಂಕಲಕುಂಟ ಗ್ರಾಮದ ಕುಂಟೆಪ್ಪ ಹಣಮಪ್ಪ ಪೂಜಾರಿ ರವರ ವಾಸದ ಮನೆ/ತಗಡಿನ ಶೆಡ್ಡಿನಲ್ಲಿ ಅಕ್ರಮವಾಗಿ ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ ಒಟ್ಟು 188 ಗ್ರಾಂ ಒಣ ಗಾಂಜಾವನ್ನು ಜಪ್ತಿ ಪಡಿಸಿದ್ದು, ಈ ಆರೋಪಿಯ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯ 1985 ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸುತ್ತಿದೆ.
ಈ ದಾಳಿಯಲ್ಲಿ ಅಬಕಾರಿ ನೀರಿಕ್ಷಕ ಶಂಕರ ಗುಡದಾರ್, ಕೊಪ್ಪಳ ಉಪ ವಿಭಾಗದ ಅಬಕಾರಿ ಉಪ ನೀರಿಕ್ಷಕ ತಿಮ್ಮಯ್ಯ, ಹಿರೇವಂಕಲಾಕುಂಟ್ ಗ್ರಾಮ ಆಡಳಿತ ಅಧಿಕಾರಿ ಅಂಜು, ಅಬಕಾರಿ ಮುಖ್ಯ ಪೇದೆಗಳಾದ ಮೋಹನ್ ಕುಮಾರ್, ಹನಮಂತಪ್ಪ ಕುರಿ, ಗೃಹ ರಕ್ಷಕ ಶರಣಪ್ಪ ಇತರರು ಇದ್ದರು.