Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ರಾಜ್ಯ

ಕೊಪ್ಪಳದಲ್ಲಿ ಬಲ್ಡೋಟ್ ಉಕ್ಕು ಕಾರ್ಖಾನೆ ಸ್ಥಾಪನೆಗೆ ಜೆಡಿಎಸ್ ವಿರೋಧ

ಜನತೆಯ ಬೇಡಿಕೆಗೆ ಸ್ಪಂದನೆ: ಕುಮಾರಸ್ವಾಮಿ ಭರವಸೆ : ಸಿ ವಿ ಚಂದ್ರಶೇಖರ

Hosashake News by Hosashake News
February 14, 2025
in ರಾಜ್ಯ
0
ಕೊಪ್ಪಳದಲ್ಲಿ ಬಲ್ಡೋಟ್ ಉಕ್ಕು ಕಾರ್ಖಾನೆ ಸ್ಥಾಪನೆಗೆ ಜೆಡಿಎಸ್ ವಿರೋಧ
Share on FacebookShare on Twitter

ಬಲ್ದೋಟ ಸಮೂಹ ಹಾಗೂ ರಾಜ್ಯ ಸರಕಾರ ಉಕ್ಕು ಘಟಕದ ಸ್ಥಾಪನೆಗೆ ಒಪ್ಪಂದ ಮಾಡಿಕೊಂಡ ನಂತರ ಕೊಪ್ಪಳದಲ್ಲಿ ವ್ಯಕ್ತವಾದ ವಿರೋಧಕ್ಕೆ ಬೆಂಬಲಿಸಿ ಶುಕ್ರವಾರ ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ಅವರು ಕೇಂದ್ರ ಸಚಿವರನ್ನು ಬೆಂಗಳೂರಿನ ಜೆ ಪಿ ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು

ಹೊಸಶಕೆ ನ್ಯೂಸ್-ಕೊಪ್ಪಳ:          ಬಲ್ದೋಟ ಸಮೂಹದ ಉದ್ದೇಶಿತ 54,000 ಕೋಟಿ ರೂಪಾಯಿ ವೆಚ್ಚದ ಉಕ್ಕು ಕೈಗಾರಿಕಾ ಘಟಕದ ಸ್ಥಾಪನೆಯ ವಿರುದ್ಧ ವ್ಯಕ್ತವಾಗುತ್ತಿರುವ ವಿರೋಧವನ್ನು ಗಮನದಲ್ಲಿಟ್ಟುಕೊಂಡು ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದಿಸಲು ಸೂಕ್ತ ಕ್ರಮ‌ ಕೈಗೊಳ್ಳುವುದಾಗಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ‌ ಎಂದು ಜೆ ಡಿ (ಎಸ್) ಪಕ್ಷದ ಜಿಲ್ಲಾ ಘಟಕದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಬಲ್ದೋಟ ಸಮೂಹ ಹಾಗೂ ರಾಜ್ಯ ಸರಕಾರ ಉಕ್ಕು ಘಟಕದ ಸ್ಥಾಪನೆಗೆ ಒಪ್ಪಂದ ಮಾಡಿಕೊಂಡ ನಂತರ ಕೊಪ್ಪಳದಲ್ಲಿ ವ್ಯಕ್ತವಾದ ವಿರೋಧವನ್ನು ಗಮನದಲ್ಲಿಟ್ಟುಕೊಂಡು ಶುಕ್ರವಾರ ಬೆಳಿಗ್ಗೆ ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ಅವರು ಕೇಂದ್ರ ಸಚಿವರನ್ನು ಬೆಂಗಳೂರಿನ ಜೆ ಪಿ ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಘಟಕದ ಸ್ಥಾಪನೆಯಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಮಾಹಿತಿ ನೀಡಿ ಮಧ್ಯಪ್ರವೇಶಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು.

ಕೈಗಾರಿಕಾ ಘಟಕಗಳ ಮಾಲಿನ್ಯದಿಂದ ಈಗಾಗಲೇ ನಲುಗಿ ಹೋಗಿರುವ ಕೊಪ್ಪಳದ ಜನತೆಯನ್ನು ರಾಜ್ಯ ಸರಕಾರ ಬೆಂಕಿಯಿಂದ ಬಾಣಲೆಗೆ ನೂಕಿದೆ. ಸಮುದಾಯದ ಆರೋಗ್ಯ ಹಾಗೂ ಕೃಷಿ ಕ್ಷೇತ್ರಗಳ ಮೇಲೆ ಮಾರಕ ಪೆಟ್ಟು ನೀಡುವ ಈ ಯೋಜನೆ ಯಾವುದೇ ಕಾರಣಕ್ಕೂ ಅನುಷ್ಠಾನ ಆಗಬಾರದೆಂದು ಒತ್ತಿ ಹೇಳಿದ್ದಾರೆಕ್ರಿಯಾಶೀಲವಾಗಿರುವ ಕೈಗಾರಿಕಾ ಘಟಕಗಳು ನಿಯಮಗಳನ್ನು ಉಲ್ಲಂಘಿಸಿ ಕೊಪ್ಪಳವನ್ನು ನರಕ ಸದೃಶವನ್ನಾಗಿಸಿವೆ. ಅವುಗಳ ವಿರುದ್ಧ ಕೇಂದ್ರ ಸರಕಾರದ ನಿಯಮಾವಳಿಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವರು ತಮಗೆ ಕೊಪ್ಪಳದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ಇದೆ. ಅಭಿವೃದ್ಧಿಗೆ ಕೈಗಾರಿಕಾ ಘಟಕಗಳ ಸ್ಥಾಪನೆ ಅಗತ್ಯ. ಆದರೆ ಸಮುದಾಯದ ಆರೋಗ್ಯ, ಪರಿಸರ ಹಾಗೂ ಕೃಷಿ ಕ್ಷೇತ್ರಗಳಿಗೆ ಮಾರಕವಾಗುವ ಯಾವುದೇ ಯೋಜನೆಗಳನ್ನು ಒಪ್ಪಲಾಗದು. ಕೊಪ್ಪಳ ಜನತೆಯ ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿರುವರು ಎಂದು ಜೆಡಿಎಸ್ ಮೂಲಗಳು ತಿಳಿಸಿವೆ

Previous Post

Next Post

ಕೊಪ್ಪಳ ವಿಶ್ವವಿದ್ಯಾಲಯ ಮುಚ್ಚುವುದು  ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆ :ನವೀನಕುಮಾರ ಗುಳಗಣ್ಣನವರ್

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!