Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಕಲೆ-ಸಾಹಿತ್ಯ-ಸಂಸ್ಕೃತಿ

ಭಾಷೆ, ನೆಲ-ಜಲದ ಬಗ್ಗೆ ಜಾಗೃತಿ ಮೂಡಿಸಲು ಸಾಹಿತ್ಯ ಸಮ್ಮೇಳನಗಳು ಅವಶ್ಯ ಶಾಸಕ ಹಿಟ್ನಾಳ

ಕೊಪ್ಪಳ ತಾಲೂಕು ಸಾಹಿತ್ಯ ಸಮ್ಮೇಳನ : ಲಾಂಛನ ಬಿಡುಗಡೆ

Hosashake News by Hosashake News
March 16, 2025
in ಕಲೆ-ಸಾಹಿತ್ಯ-ಸಂಸ್ಕೃತಿ, ಜಿಲ್ಲೆ, ಪ್ರಾದೇಶಿಕ, ಸಾಮಾಜಿಕ, ಸುದ್ದಿ
0
ಭಾಷೆ, ನೆಲ-ಜಲದ ಬಗ್ಗೆ ಜಾಗೃತಿ ಮೂಡಿಸಲು ಸಾಹಿತ್ಯ ಸಮ್ಮೇಳನಗಳು ಅವಶ್ಯ ಶಾಸಕ ಹಿಟ್ನಾಳ
Share on FacebookShare on Twitter

ಹೊಸಶಕೆ ನ್ಯೂಸ್-ಕೊಪ್ಪಳ:

ಭಾಷೆ, ನೆಲ-ಜಲದ ಬಗ್ಗೆ ಜಾಗೃತಿ ಮೂಡಿಸಲು ಸಾಹಿತ್ಯ ಸಮ್ಮೇಳನಗಳು ಅವಶ್ಯ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಮಾರ್ಚ್ 23 ರಂದು ಹಲಗೇರಿ ಗ್ರಾಮದಲ್ಲಿ ಆಯೋಜಿಸಿರುವ 10 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ಪ್ರವಾಸಿ ಮಂದಿರದಲ್ಲಿ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿ, ಸಮ್ಮೇಳನಾಧ್ಯಕ್ಷೆ ಮಾಲಾ ಬಡಿಗೇರ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಲಗೇರಿ ಗ್ರಾಮದಲ್ಲಿ ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ, ನಾಡಹಬ್ಬವಾಗಿ ಆಚರಿಸಲು  ತಾಲ್ಲೂಕಿನ ಎಲ್ಲಾ ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡುವುದಾಗಿ ಹೇಳಿದರು.ಸಮ್ಮೇಳನ ಸರ್ವಾಧ್ಯಕ್ಷೆ ಮಾಲಾ ಬಡಿಗೇರ ಮಾತನಾಡಿ, ಮಹಿಳೆಗೆ ಸಮ್ಮೇಳನ ಅಧ್ಯಕ್ಷತೆ ನೀಡಿರುವುದು ಸಂತಸ ತಂದಿದೆ.ಮಹಿಳೆಯರ ಆಶೋತ್ತರಗಳಿಗೆ ಧ್ವನಿಯಾಗುತ್ತೇನೆ ಎಂದರು. ಸಾಹಿತಿ,ಸ್ವಾತಂತ್ರ್ಯ ಹೋರಾಟಗಾರ ಡಾ.ಪಂಚಾಕ್ಷರಿ ಹಿರೇಮಠ ಅವರ ನಿಧನಕ್ಕೆ ಇದೇ ಸಂದರ್ಭದಲ್ಲಿ ಮೌನ ಆಚರಿಸಿ,ಸಂತಾಪ ವ್ಯಕ್ತಪಡಿಸಲಾಯಿತು.

ತಾಲೂಕು ಕಸಾಪ ಅಧ್ಯಕ್ಷ ರಾಮಚಂದ್ರಗೌಡ ಬಿ.ಗೊಂಡಬಾಳ , ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಶರಣಪ್ಪ ಬಾಚಲಾಪುರ, ಸಾಹಿತಿ ಡಾ.ಮಹಾಂತೇಶ ಮಲ್ಲನಗೌಡ್ರ, ಸಂಶೋಧಕ ಡಾ.ಸಿದ್ಧಲಿಂಗಪ್ಪ ಕೋಟ್ನೇಕಲ್, ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಡೊಳ್ಳಿನ, ಪತ್ರಕರ್ತರಾದ ಸೋಮರೆಡ್ಡಿ ಅಳವಂಡಿ, ಹುಸೇನ್ ಪಾಷಾ,ಹ ನುಮಂತ ಹಳ್ಳಿಕೇರಿ, ಡಾ.ಶ್ರೀನಿವಾಸ ಹ್ಯಾಟಿ,ಕ ಸಾಪ ಪದಾಧಿಕಾರಿಗಳಾದ ಸಂತೋಷ ದೇಶಪಾಂಡೆ , ರಮೇಶ ತುಪ್ಪದ, ಮಲ್ಲಿಕಾರ್ಜುನ ಹ್ಯಾಟಿ, ಮಾರುತೇಶ ಅಂಗಡಿ, ಬಸವರಾಜ ಕರುಗಲ್, ನಾಗರಾಜನಾಯಕ ಡಿ.ಡೊಳ್ಳಿನ, ಶರಣು ಡೊಳ್ಳಿನ , ಸೋಮನಗೌಡ ವಗರನಾಳ, ಇತರರು ಇದ್ದರು.

ಲಾಂಛನ: ಹಲಗೇರಿ ಗ್ರಾಮ ದೇವತೆ ಶಾಂಭವಿ ದೇವಿಯನ್ನು ಕೇಂದ್ರವಾಗಿಟ್ಟುಕೊಂಡು, ಸಾಮ್ರಾಟ ಅಶೋಕನ ಶಿಲಾಶಾಸನ, ಕೊಪ್ಪಳ ಕೋಟೆ, ಜೈನ ಬಸದಿ, ತೊಗಲು ಗೊಂಬೆ, ಕಿನ್ನಾಳ ಕಲೆ , ಹುಲಿಗೆಮ್ಮ ದೇವಿ, ಜೀವನಾಡಿ ತುಂಗಭದ್ರಾ ಜಲಾಶಯ, ಗವಿಮಠ, ಸಾಮರಸ್ಯ ತಾಣ ಮರ್ದಾನ ಅಲಿ ದರ್ಗಾದ ಭಾವಚಿತ್ರಗಳ ಮೇಲ್ಭಾಗದಲ್ಲಿ ಕನ್ನಡ ತಾಯಿ ಭುವನೇಶ್ವರಿ ಹಾಗೂ ನಾಡಧ್ವಜಗಳನ್ನು ಒಳಗೊಂಡಂತೆ ರಮೇಶ್‌ ತುಪ್ಪದ ಹಾಗೂ ಶರಣು ಡೊಳ್ಳಿನ ವಿನ್ಯಾಸಗೊಳಿಸಿದ್ದಾರೆ.

Tags: Koppal Sahittya Samaelana HlageriKoppal Taluk Literary Conference: Logo releasedKoppal Taluk Sahittya Samelanaಕೊಪ್ಪಳ ತಾಲೂಕು ಸಾಹಿತ್ಯ ಸಮ್ಮೇಳನ : ಲಾಂಛನ ಬಿಡುಗಡೆನೆಲ-ಜಲದ ಬಗ್ಗೆ ಜಾಗೃತಿ ಮೂಡಿಸಲು ಸಾಹಿತ್ಯ ಸಮ್ಮೇಳನಗಳು ಅವಶ್ಯ ಶಾಸಕ ಹಿಟ್ನಾಳಭಾಷೆ
Previous Post

ಮನಸ್ಸು, ದೇಹದ ಸದೃಡತೆಗೆ ಕ್ರೀಡೆ ಬಹು ಮುಖ್ಯ : ಗ್ರಾ.ಪಂ ಅಧ್ಯಕ್ಷೆ ಫರೀದಾಬೇಗಂ

Next Post

ದಿ. ಕೆ.ಹೆಚ್. ಪಾಟೀಲರು ಕನ್ನಡ ನಾಡಿನ ಹೆಮ್ಮೆಯ ಜನಮೆಚ್ಚಿನ ನಾಯಕ : ಸಿದ್ದರಾಮಯ್ಯ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!