ಹೊಸಶಕೆ ನ್ಯೂಸ್-ಕೊಪ್ಪಳ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ಮತ್ತು ಆರ್ಟಿಐ ವಿಭಾಗಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ಪ್ರವೀಣ್.ಜಿ ಅಡಗಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಎ.ಐ.ಸಿಸಿ ಕಾನೂನು, ಮಾನವಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಡಾ.ಅಭಿಷೇಕ್ ಮನು ಸಿಂಘಿಯ ಅವರು ಉಚ್ಚನ್ಯಾಯಾಲಯದ ವಕೀಲರಾದ ಪ್ರವೀಣ್.ಜಿ ಅಡಗಟ್ಟಿ ಅವರನ್ನು ಮಾನವಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಿ ಅದೇಶಿಸಿದ್ದು, ಇದಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಅನುಮೋದನೆ ನೀಡಿದ್ದಾರೆ.
ಕಾಂಗ್ರೆಸ್ ಸಮಿತಿಯ ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ಮತ್ತು ಆರ್ಟಿಐ ವಿಭಾಗಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ನೇಮಕವಾದ ಪ್ರವೀಣ್.ಜಿ ಅಡಗಟ್ಟಿ ಅವರಿಗೆ ಅವರ ಅಭಿಮಾನಿ, ಹಿತೈಷಿಗಳು ಅಭಿನಂದದನೆಗಳನ್ನು ತಿಳಿಸಿರುವರು.
