Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕೊಪ್ಪಳ ಜಿಲ್ಲೆಗೆ ಹೇಳಿಕೊಳ್ಳುವಂತ ಯೋಜನೆ ಘೋಷಿಸಿಲ್ಲ : ಡಾ. ಬಸವರಾಜ ಕ್ಯಾವಟರ್

ಕೇವಲ ಒಂದು ವರ್ಗ ಓಲೈಸುವುದನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಎಂದುಕೊಂಡಿದ್ದಾರೆ-ಕ್ಯಾವಟರ್

Hosashake News by Hosashake News
March 7, 2025
in ಜಿಲ್ಲೆ, ದೇಶ, ಪ್ರಾದೇಶಿಕ, ರಾಜ್ಯ
0
ಕೊಪ್ಪಳ ಜಿಲ್ಲೆಗೆ ಹೇಳಿಕೊಳ್ಳುವಂತ ಯೋಜನೆ ಘೋಷಿಸಿಲ್ಲ : ಡಾ. ಬಸವರಾಜ ಕ್ಯಾವಟರ್
Share on FacebookShare on Twitter

ಹೊಸಶಕೆ ನ್ಯೂಸ್- -ಕೊಪ್ಪಳ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ಮೈಸೂರಿಗೆ ಮಾತ್ರ ಸೀಮಿತವಾದಂತಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿರುವ ವೈದ್ಯ ಬಸವರಾಜ ಕ್ಯಾವಟರ್ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದ 31 ಜಿಲ್ಲೆಗಳ ಜನರಿಗೆ ಅನುಕೂಲವಾಗುವಂತ ಬಜೆಟ್ ಮಂಡನೆಯಾಗಿಲ್ಲ ಎಂದು  ಹೇಳಿದ್ದಾರೆ.

ಹೆಚ್ಚು ಅನುದಾನ, ಯೋಜನೆಗಳನ್ನು ಮೈಸೂರಿನ ಪಾಲು ಮಾಡಿಕೊಳ್ಳುವ ಮೂಲಕ ಸಿದ್ದರಾಮಯ್ಯ ಅವರು ಉಳಿದ ಜಿಲ್ಲೆಗಳಿಗೆ ಅನ್ಯಾಯ ಮಾಡಿದ್ದಾರೆ. ಅಲ್ಲದೆ, ಅಲ್ಪ ಸಂಖ್ಯಾತರ ತುಷ್ಠಿಕರಣ ಸದರಿ ಬಜೆಟ್ ಮೂಲಕ ಕಂಡು ಬರುತ್ತಿದೆ. ಹೆಸರಿಗೆ ಮಾತ್ರ ಬಜೆಟ್ ನಲ್ಲಿ ಸರ್ವ ಜನಾಂಗಕ್ಕೂ ನ್ಯಾಯ ಒದಗಿಸುವ ಬಜೆಟ್ ಇದಾಗಿದೆ ಎನ್ನುವ ವ್ಯಾಖ್ಯವಾಗಿದೆ. ಆದರೆ, ವಾಸ್ತವದಲ್ಲಿಲ್ಲ ಎನ್ನುವುದು ಗಮರ್ನಾಹ ಸಂಗತಿ. ಕೇವಲ ಒಂದು ವರ್ಗ ಓಲೈಸುವುದನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಎಂದುಕೊಂಡಿದ್ದಾರೆ.

ಇನ್ನೂ ಕೊಪ್ಪಳ ಜಿಲ್ಲೆಗೂ ಹೇಳಿಕೊಳ್ಳುವಂತ ಯೋಜನೆ ಘೋಷಿಸಿಲ್ಲ. ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಘೋಷಣೆ ಮಾಡಿದಂತೆ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಆರಂಭಿಸಬೇಕು. ಕೇವಲ ಘೋಷಣೆ ಮಾಡಿ ಕೈ ಬಿಡಬಾರದು. ಈ ಹಿಂದಿನ ಬಜೆಟ್ ನಲ್ಲಿ ಘೋಷಿಸಿದ ಯೋಜನೆಗಳು ಹಾಗೆ ಉಳಿದಿವೆ, ವಿನಹ ಅನುಷ್ಠಾನಗೊಂಡಿಲ್ಲ. ಹೀಗಾಗಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯೂ ಈ ಸಾಲಿಗೆ ಸೇರಬಾರದು ಎಂದು ಆಗ್ರಹಿಸಿದ್ದಾರೆ.

Previous Post

ಸರ್ವರಿಗೂ ಸಮಪಾಲಿನ‌ ಬಜೆಟ್ ; ಸಚಿವ ಶಿವರಾಜ್ ತಂಗಡಗಿ

Next Post

ಇದು ಹಾರಿಕೆಯ, ತೋರಿಕೆಯ ಬಜೆಟ್: ಸಿ ವಿ ಚಂದ್ರಶೇಖರ್

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!