ಹೊಸಶಕೆ ನ್ಯೂಸ್- -ಕೊಪ್ಪಳ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ಮೈಸೂರಿಗೆ ಮಾತ್ರ ಸೀಮಿತವಾದಂತಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿರುವ ವೈದ್ಯ ಬಸವರಾಜ ಕ್ಯಾವಟರ್ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದ 31 ಜಿಲ್ಲೆಗಳ ಜನರಿಗೆ ಅನುಕೂಲವಾಗುವಂತ ಬಜೆಟ್ ಮಂಡನೆಯಾಗಿಲ್ಲ ಎಂದು ಹೇಳಿದ್ದಾರೆ.
ಹೆಚ್ಚು ಅನುದಾನ, ಯೋಜನೆಗಳನ್ನು ಮೈಸೂರಿನ ಪಾಲು ಮಾಡಿಕೊಳ್ಳುವ ಮೂಲಕ ಸಿದ್ದರಾಮಯ್ಯ ಅವರು ಉಳಿದ ಜಿಲ್ಲೆಗಳಿಗೆ ಅನ್ಯಾಯ ಮಾಡಿದ್ದಾರೆ. ಅಲ್ಲದೆ, ಅಲ್ಪ ಸಂಖ್ಯಾತರ ತುಷ್ಠಿಕರಣ ಸದರಿ ಬಜೆಟ್ ಮೂಲಕ ಕಂಡು ಬರುತ್ತಿದೆ. ಹೆಸರಿಗೆ ಮಾತ್ರ ಬಜೆಟ್ ನಲ್ಲಿ ಸರ್ವ ಜನಾಂಗಕ್ಕೂ ನ್ಯಾಯ ಒದಗಿಸುವ ಬಜೆಟ್ ಇದಾಗಿದೆ ಎನ್ನುವ ವ್ಯಾಖ್ಯವಾಗಿದೆ. ಆದರೆ, ವಾಸ್ತವದಲ್ಲಿಲ್ಲ ಎನ್ನುವುದು ಗಮರ್ನಾಹ ಸಂಗತಿ. ಕೇವಲ ಒಂದು ವರ್ಗ ಓಲೈಸುವುದನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಎಂದುಕೊಂಡಿದ್ದಾರೆ.
ಇನ್ನೂ ಕೊಪ್ಪಳ ಜಿಲ್ಲೆಗೂ ಹೇಳಿಕೊಳ್ಳುವಂತ ಯೋಜನೆ ಘೋಷಿಸಿಲ್ಲ. ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಘೋಷಣೆ ಮಾಡಿದಂತೆ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಆರಂಭಿಸಬೇಕು. ಕೇವಲ ಘೋಷಣೆ ಮಾಡಿ ಕೈ ಬಿಡಬಾರದು. ಈ ಹಿಂದಿನ ಬಜೆಟ್ ನಲ್ಲಿ ಘೋಷಿಸಿದ ಯೋಜನೆಗಳು ಹಾಗೆ ಉಳಿದಿವೆ, ವಿನಹ ಅನುಷ್ಠಾನಗೊಂಡಿಲ್ಲ. ಹೀಗಾಗಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯೂ ಈ ಸಾಲಿಗೆ ಸೇರಬಾರದು ಎಂದು ಆಗ್ರಹಿಸಿದ್ದಾರೆ.