ಹೊಸಶಕೆ ನ್ಯೂಸ್–ಕೊಪ್ಪಳ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಆಪ್ತರು, ಜಿಲ್ಲಾ ಪಂಚಾಯತ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಗಡಾದ ಇವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಇಲಾಖೆಯ (ಅಭಿವೃದ್ಧಿ ಪ್ರಾಧಿಕಾರ ಮತ್ತು ನಯೋಸೇ )ಸರಕಾರದ ಅಧೀನ ಕಾರ್ಯದರ್ಶಿ ಲತಾ.ಕೆ ಅವರು ಜ.12 ರಂದು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಹಾಗೂ ಅವರ ಹೆಸರಲ್ಲಿ ಹೊರಡಿಸಿರುವ ಆದೇಶದಲ್ಲಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987 ರ ಕಲಂ 3(3) (ಎ) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಪ್ರಸ್ತತ ಹಾಲಿ ಅಧ್ಯಕ್ಷರಾಗಿರುವ ಶ್ರೀನಿವಾಸ ಗುಪ್ತಾ ಇವರ ಬದಲಿಗೆ ಪ್ರಸನ್ನ ವಿ.ಗಡಾದ ಇವರನ್ನು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಲಾಗಿದೆ.
