ಹೊಸಶಕೆ ನ್ಯೂಸ್-ಯಲಬುರ್ಗಾ: ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ, ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಮರು ಅರ್ಜಿ ಆಹ್ವಾನಿಸಲಾಗಿದೆ.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಮತ್ತು ಪರಿಶಿಷ್ಟ ಪಂಗಡದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ ಇನ್ಸ್ಟಿಟ್ಯೂಟ್ ವಿಷಯದ ಬಗ್ಗೆ ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೇಂಟ್ ಬೆಂಗಳೂರು ರವರ ಮೂಲಕ ವಸತಿರಹಿತ ಕಾರ್ಯಕ್ರಮವನ್ನು ಜಾರಿಗೂಳಿಸಲು ಉದ್ದೇಶಿಸಲಾಗಿರುತ್ತದೆ.
ನಾಲ್ಕು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಫುಡ್ ಕ್ರಾಪ್ಟ ಇನ್ಸ್ಟಿಟ್ಯೂಟ್ ವಿಷಯದ ಬಗ್ಗೆ ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೇಂಟ್ ನಡೆಸಲು ಸಹಾಯಧನ ನೀಡಲು ಉದ್ದೇಶಿಸಲಾಗಿರುತ್ತದೆ. ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಪ್ಪಳ ಜಿಲ್ಲೆಗೆ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳು ಹಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗದಿಪಡಿಸಿದೆ. ಈ ತರಬೇತಿಯನ್ನು ವಸತಿಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ.
ತರಬೇತಿಗಾಗಿ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು. 20 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು. ಆಸಕ್ತರು ಕಛೇರಿಯ ವೇಳೆಯಲ್ಲಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ, ಜಿಲ್ಲಾಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಇಲ್ಲಿಂದ ಅರ್ಜಿಯನ್ನು ಉಚಿತವಾಗಿ ಪಡೆದು ಏಪ್ರಿಲ್ 5 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ: 08539-225566 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.