ಹೊಸಶಕೆ ನ್ಯೂಸ್-ಕೊಪ್ಪಳ : ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಅವರ ಭಾವಚಿತ್ರಕ್ಕೆ ಶುಕ್ರವಾರ ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುನ್ಸಿಪಾಲ್ ತಹಶೀಲ್ದಾರಾದ ವಿನಾಯಕ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಶಂಕರ್ ಮಾಮನಿ, ಮುತ್ತು ಚಲವಾದಿ, ಮತ್ತಿತರರು ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.