Hosashake News
No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ
Hosashake News
No Result
View All Result
Home ಜಿಲ್ಲೆ

ಕುಡಿಯುವ ನೀರು, ಮೇವಿನ ಕೊರತೆ ಉಂಟಾಗದಂತೆ ಕ್ರಮ: ವಿಠ್ಠಲ್ ಚೌಗಲಾ

ಖಾಸಗಿ ಬೋರೆವೆಲ್ ಗುರುತಿಸಿ ಮಾಲೀಕರಿಂದ ಒಪ್ಪಂದ : ತಾ.ಪಂ. ಇಒ ದುಂಡಪ್ಪ ತುರಾದಿ

Hosashake News by Hosashake News
April 4, 2025
in ಜಿಲ್ಲೆ, ಪ್ರಾದೇಶಿಕ, ರಾಜ್ಯ, ಸುದ್ದಿ
0
ಕುಡಿಯುವ ನೀರು, ಮೇವಿನ ಕೊರತೆ ಉಂಟಾಗದಂತೆ ಕ್ರಮ: ವಿಠ್ಠಲ್ ಚೌಗಲಾ
Share on FacebookShare on Twitter

ಕೊಪ್ಪಳ ತಾಲ್ಲೂಕಿನಲ್ಲಿ ಬೇಸಿಗೆ ಸಮಯದಲ್ಲಿ ಸಮಸ್ಯೆ ಉಂಟಾಗದಂತೆ ತಡೆಯಲು ಅಧಿಕಾರಿಗಳ ಸಭೆ

ಹೊಸಶಕೆ ನ್ಯೂಸ್-ಕೊಪ್ಪಳ : ಬೇಸಿಗೆ ಪ್ರಾರಂಭವಾಗಿರುವುದರಿಂದ ಕುಡಿಯುವ ನೀರಿನ ಕೊರತೆ ಉಂಟಾಗುವ ಸಂಭವವಿದ್ದು, ಗ್ರಾಮೀಣ ಮತ್ತು ನಗರಕ್ಕೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನಚ್ಛೇರಿಕೆ ಕ್ರಮ ಕೈಗೊಳ್ಳಲು ತಹಶೀಲ್ದಾರ  ವಿಠ್ಥಲ್ ಚೌಗಲಾ ಸೂಚಿಸಿದರು.

ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಬೇಸಿಗೆ ಪ್ರಾರಂಭವಾಗಿರುವದರಿಂದ ಗ್ರಾಮೀಣ ಭಾಗ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಮಾತನಾಡಿ, ನಾನ್ ಪೋರ್ಟೆಬಲ್ ಬಂದ ನೀರಿನ ಮೂಲಗಳಿಂದ ಕುಡಿಯುವ ನೀರು ಸರಬರಾಜು ಮಾಡಬಾರದು ಮತ್ತು ಜನರಿಗೆ ಕುಡಿಯಲು ಬಳಸಬಾರದೆಂದು ಜಾಗೃತಿ ಮೂಡಿಸಲು ಸೂಚಿಸಿದರು. ಪ್ರತಿ ವಾರ ಕಡ್ಡಾಯವಾಗಿ ಗ್ರಾಮ ಪಂಚಾಯತಿ ಮಟ್ಟದ ಕುಡಿಯುವ ನೀರಿನ ಮತ್ತು ಮೇವಿನ ಟಾಸ್ಕ್ ಫೋರ್ಸ್ ಸಭೆ  ಜರುಗಿಸಿ ಅದರ ಪ್ರತಿಯನ್ನು ತಾಲೂಕ ಪಂಚಾಯತಿಗೆ ಸಲ್ಲಿಸಲು ತಿಳಿಸಿದರು.

ಮುನ್ನೆಚ್ಚರಿಕೆಯಾಗಿ ಖಾಸಗಿ ಬೋರೆವೆಲ್ ಗುರುತಿಸಿ ಮಾಲೀಕರಿಂದ ಒಪ್ಪಂದ : ತಾ.ಪಂ. ಇಒ ದುಂಡಪ್ಪ ತುರಾದಿ :   ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಮಾತನಾಡಿ ನೆಲೋಗಿಪುರ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ತಾಲೂಕಿನ ಅಳವಂಡಿ, ಬೋಚನಹಳ್ಳಿ, ಕವಲೂರು, ಹಟ್ಟಿ 4 ಗ್ರಾಮ ಪಂಚಾಯತಿಗಳ 14 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಮುಂದಿನ ಒಂದು ವಾರದ ವರೆಗೆ ನದಿಯಲ್ಲಿರುವ ನೀರಿನ ಮೂಲಕ ಸರಬರಾಜು ಮಾಡಬಹುದಾಗಿದ್ದು ಮತ್ತು ಮುಂದಿನ ವಾರದಿಂದ ಗ್ರಾಮ ಪಂಚಾಯತಿಗಳಿಗೆ ನೀರಿನ ಅಭಾವವಾಗಬಹುದು.ಈ 4 ಗ್ರಾಮ ಪಂಚಾಯತಿಯವರು ಸರಕಾರಿ ಬೋರೆವೆಲ್ ಗಳನ್ನು ಪರಿಶೀಲಿಸಿ ಸನ್ನದ್ದು ಮಾಡಿಕೊಳ್ಳಲು ಮತ್ತು ಮುನ್ನೆಚ್ಚರಿಕೆಯಾಗಿ ಖಾಸಗಿ ಬೋರೆವೆಲ್ ಗುರುತಿಸಿ ಮಾಲೀಕರಿಂದ ಒಪ್ಪಂದ ಮಾಡಿಕೊಳ್ಳಲು ತಿಳಿಸಿದರು.   ಸಭೆಯಲ್ಲಿ ನಗರಸಭೆಯ ಅಧಿಕಾರಿಗಳು, ಭಾಗ್ಯನಗರ ಪಟ್ಟಣ ಪಂಚಾಯತಿಯ ಅಧಿಕಾರಿಗಳು, ತಾಲೂಕ ಮಟ್ಟದ ಅಧಿಕಾರಿಗಳು, ಉಪತಹಶೀಲ್ದಾರರು, ಕಂದಾಯ ನಿರಿಕ್ಷಕರು, ಪಂಚಾಯತ ಅಭಿವೃದ್ದಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ತಾಲೂಕ ಪಂಚಾಯತಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Tags: Koppal T.P. EO Dundappa TuradiKoppal Tehsildar Vitthal ChowgalaKoppal ಕುಡಿಯುವ ನೀರುಕುಡಿಯುವ ನೀರುಮುನ್ನೆಚ್ಚರಿಕೆಯಾಗಿ ಖಾಸಗಿ ಬೋರೆವೆಲ್ ಗುರುತಿಸಿ ಮಾಲೀಕರಿಂದ ಒಪ್ಪಂದ : ತಾ.ಪಂ. ಇಒ ದುಂಡಪ್ಪ ತುರಾದಿಮೇವಿನ ಕೊರತೆ ಉಂಟಾಗದಂತೆ ಕ್ರಮ: ತಹಸೀಲ್ದಾರ ವಿಠ್ಠಲ್ ಚೌಗಲಾ
Previous Post

ಕೊಪ್ಪಳ ನಗರಸಭೆಯಲ್ಲಿ ಇ-ಖಾತಾ ಅಭಿಯಾನಕ್ಕೆ ಚಾಲನೆ

Next Post

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ‌ ಅಧಿಕಾರಿಗಳ ಸಭೆ: ಸಚಿವ ಶಿವರಾಜ್ ತಂಗಡಗಿ

Hosashake News

Hosashake News

Leave a Reply Cancel reply

Your email address will not be published. Required fields are marked *

Archive

Most commented

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಪೊಲೀಸ್ ಇಲಾಖೆಯಿಂದ ಮೋರೆರ ಗುಡ್ಡ (ಹಿರೇ ಬೇಣಕಲ್ ಗುಡ್ಡ) ಬೆಟ್ಟದ ಚಾರಣ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

ಹೊಸಶಕೆ ದಿನಪತ್ರಿಕೆ

  • Facebook
  • Twitter
  • Instagram
Call us: +91 7026237749
Email: hosashakepress@gmail.com

© 2025 Hosashakenews - Powered by KIPL.

No Result
View All Result
  • Home
  • About Us
  • E-paper
  • ಸುದ್ದಿ
  • ದೇಶ
  • ರಾಜ್ಯ
  • ಜಿಲ್ಲೆ
  • ಪರಿಸರ
  • ಅವಲೋಕನ
  • ಶಿಕ್ಣಣ-ಆರೋಗ್ಯ
  • ಕ್ರೀಡೆ
  • ಕಲೆ-ಸಾಹಿತ್ಯ-ಸಂಸ್ಕೃತಿ
  • ರಾಜಕೀಯ
  • ಪ್ರಾದೇಶಿಕ

© 2025 Hosashakenews - Powered by KIPL.

error: Content is protected !!